ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲೆಯಲ್ಲಿ ನೀರು ಕುಡಿಯುತ್ತಿದ್ದ ವೇಳೆ ನಾಯಿಗಳು ಅಟ್ಟಾಡಿಸಿಕೊಂಡು ಬಂದಿವೆ. ಈ ಸಮಯದಲ್ಲಿ ನಾಯಿಗಳಿಂದ ಜಿಂಕೆ ತಪ್ಪಿಸಿಕೊಳ್ಳಲು ನಾಲೆಗೆ ಬಿದ್ದಿದೆ. ಸುಮಾರು ಎಂಟು ವರ್ಷದ ಗಂಡು ಜಿಂಕೆಯಾಗಿದ್ದು, ನಾಲೆಯಲ್ಲಿ ತೇಲಿಕೊಂಡು ಬರುತ್ತಿರುವುದನ್ನು ಕಂಡ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ. ಜಿಂಕೆಯನ್ನು ಸುರಕ್ಷಿತವಾಗಿ ಗ್ರಾಮದ ಯುವಕರ ಸಹಾಯದೊಂದಿಗೆ ರಕ್ಷಣೆ ಮಾಡಿದ್ದಾರೆ.
ಜಿಂಕೆಯ ಹಿಂಬದಿಯ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಗುರುತು ಕಂಡು ಬಂದಿದೆ ನಂಜನಗೂಡಿನ ಪಶು ಇಲಾಖೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಕಾಡಿಗೆ ಬಿಡಲಾಗುವುದು ಎಂದು ನಂಜನಗೂಡಿನ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…