ಮೈಸೂರು : ನಾಡಹಬ್ಬ ಮೈಸೂರು ದಸರಾ ಬಂದ್ರೆ ಸಾಕು ಅಧಿಕಾರಿಗಳು ಮೈಸೂರಿನಲ್ಲಿ ಗುಂಡಿಬಿದ್ದ ಎಲ್ಲಾ ರಸ್ತೆಗಳಿಗೆ ಡಾಂಬಾರು ಹಾಕಿ ಅದನ್ನ ಮುಚ್ಚಿವ ಕೆಲಸಕ್ಕೆ ಮುಂದಾಗುತ್ತಿದ್ದರು. ಆದರೆ ಅಧಿಕಾರಿಗಳು ಈ ವರ್ಷ ದಸರಾಗೂ ಮುನ್ನವೇ ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಗುಂಡಿಬಿದ್ದ ರಸ್ತೆಗಳನ್ನ ಮುಚ್ಚಿವ ಕೆಲಸಕ್ಕೆ ಮುಂದಾಗಿದ್ದಾರೆ.
ನಗರದ ಪ್ರತಿ ವಾರ್ಡ್ ಗಳಲ್ಲಿರುವ ಗುಂಡಿಬಿದ್ದ ರಸ್ತೆಗಳ ಬಗ್ಗೆ ಪಾಲಿಕೆಯ ಅಧಿಕಾರಿಗಳು ಸಮೀಕ್ಷೆ ಮಾಡಿದ್ದು, ಅಂದಾಜು ೩೦ ರಿಂದ ೪೦ ಗುಂಡಿಗಳನ್ನ ಪತ್ತೆಹಚ್ಚಿದ್ದಾರೆ. ಪಾಲಿಕೆಯ ೯ ವಲಯಗಳಿಂದ ೩೫೦ಕ್ಕೂ ಹೆಚ್ಚು ಗುಂಡಿಗಳಿಗೆ ಎಂದು ಎಂಜಿನಿಯರ್ ಗಳು ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.
ಇನ್ನು ಮಹಾನಗರ ಪಾಲಿಕೆಯ ಸಾಮಾನ್ಯ ಅನುದಾನದ ಅಡಿ ಗುಂಡಿ ಮುಚ್ಚುವುದು ಸೇರಿ ರಸ್ತೆ ಡಾಂಬರೀಕರಣಕ್ಕೆ ವಲಯವಾರು ೧೦ ಲಕ್ಷ ರೂಪಾಯಿಯಂತೆ ೯ ವಲಯಗಳಿಗೆ ಕಾಮಗಾರಿ ನಡೆಸಲು ೯೦ ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ.
ಇನ್ನು ನಗರದಲ್ಲಿ ಮಳೆ ನಿಂತಿರುವುದರಿಂದ ವೈಜ್ಞಾನಿಕ ರೀತಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದ್ದು, ಆಯಾ ಎಲ್ಲಾ ವಲಯಾಧಿಕಾರಿಗಳು ಮತ್ತು ಎಂಜಿನಿಯರ್ ಗಳು ಗುರುತಿಸುವ ರಸ್ತೆಯಲ್ಲಿ ಗುತ್ತಿಗೆದಾರರು ಕೆಲಸ ನಿರ್ವಹಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…