ಮೈಸೂರು

ಕೊನೆಗೂ ಮೈಸೂರಿನಲ್ಲಿ ದಸರಾಗೂ ಮೊದಲೇ ಗುಂಡಿ ಬಿದ್ದ ರಸ್ತೆಗಳಿಗೆ ಸಿಕ್ತು ಮುಕ್ತಿ ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಬಂದ್ರೆ ಸಾಕು ಅಧಿಕಾರಿಗಳು ಮೈಸೂರಿನಲ್ಲಿ ಗುಂಡಿಬಿದ್ದ ಎಲ್ಲಾ ರಸ್ತೆಗಳಿಗೆ ಡಾಂಬಾರು ಹಾಕಿ ಅದನ್ನ ಮುಚ್ಚಿವ ಕೆಲಸಕ್ಕೆ ಮುಂದಾಗುತ್ತಿದ್ದರು. ಆದರೆ ಅಧಿಕಾರಿಗಳು ಈ ವರ್ಷ ದಸರಾಗೂ ಮುನ್ನವೇ ಪಾಲಿಕೆಯ ಎಲ್ಲಾ ವಾರ್ಡ್‌ ಗಳಲ್ಲಿ ಗುಂಡಿಬಿದ್ದ ರಸ್ತೆಗಳನ್ನ ಮುಚ್ಚಿವ ಕೆಲಸಕ್ಕೆ ಮುಂದಾಗಿದ್ದಾರೆ.

ನಗರದ ಪ್ರತಿ ವಾರ್ಡ್ ಗಳಲ್ಲಿರುವ ಗುಂಡಿಬಿದ್ದ ರಸ್ತೆಗಳ ಬಗ್ಗೆ ಪಾಲಿಕೆಯ ಅಧಿಕಾರಿಗಳು ಸಮೀಕ್ಷೆ ಮಾಡಿದ್ದು, ಅಂದಾಜು ೩೦ ರಿಂದ ೪೦ ಗುಂಡಿಗಳನ್ನ ಪತ್ತೆಹಚ್ಚಿದ್ದಾರೆ. ಪಾಲಿಕೆಯ ೯ ವಲಯಗಳಿಂದ ೩೫೦ಕ್ಕೂ ಹೆಚ್ಚು ಗುಂಡಿಗಳಿಗೆ ಎಂದು ಎಂಜಿನಿಯರ್‌ ಗಳು ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.

ಇನ್ನು ಮಹಾನಗರ ಪಾಲಿಕೆಯ ಸಾಮಾನ್ಯ ಅನುದಾನದ ಅಡಿ ಗುಂಡಿ ಮುಚ್ಚುವುದು ಸೇರಿ ರಸ್ತೆ ಡಾಂಬರೀಕರಣಕ್ಕೆ ವಲಯವಾರು ೧೦ ಲಕ್ಷ ರೂಪಾಯಿಯಂತೆ ೯ ವಲಯಗಳಿಗೆ ಕಾಮಗಾರಿ ನಡೆಸಲು ೯೦ ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ  ಮಾಡಲಾಗಿದೆ.

ಇನ್ನು ನಗರದಲ್ಲಿ ಮಳೆ ನಿಂತಿರುವುದರಿಂದ ವೈಜ್ಞಾನಿಕ ರೀತಿಯಲ್ಲಿ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದ್ದು, ಆಯಾ ಎಲ್ಲಾ ವಲಯಾಧಿಕಾರಿಗಳು ಮತ್ತು ಎಂಜಿನಿಯರ್‌ ಗಳು ಗುರುತಿಸುವ ರಸ್ತೆಯಲ್ಲಿ ಗುತ್ತಿಗೆದಾರರು ಕೆಲಸ ನಿರ್ವಹಿಸಲು ಸೂಚಿಸಿದ್ದಾರೆ ಎನ್ನಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

1 hour ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

5 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

5 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

6 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

6 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

7 hours ago