ಮೈಸೂರು

ಮಹನೀಯರ ತತ್ವ, ಆದರ್ಶ ಸಿದ್ದಾಂತಗಳು ಜನರಿಗೆ ತಲುಪಬೇಕು: ಆರ್ ಲೋಕನಾಥ್

ಮೈಸೂರು : ಜಯಂತಿಗಳನ್ನು ಆಚರಣೆ ಮಾಡುವುದು ಮಹನೀಯರ ತತ್ವ ಆದರ್ಶ ಸಿದ್ಧಾಂತಗಳನ್ನು ಜನರಿಗೆ ತಲುಪಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್ ಲೋಕನಾಥ್ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವರ್ಷ ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಒಟ್ಟಿಗೆ ಆಚರಣೆ ಆಯ್ಕೆ ಮಾಡಲಾಗಿತ್ತು. ಇದರಿಂದ ಸಂಪನ್ಮೂಲ ಕ್ರೂಡೀಕರಣ ಮಾಡಿ, ಹೆಚ್ಚಿನ ಜನರು ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವಾಗುತ್ತದೆ ಸಲಹೆ ನೀಡಿದರು.

ಪ್ರತಿ ಜಯಂತಿ ಆಚರಣೆಗೆ ಸರ್ಕಾರದ ವತಿಯಿಂದ 50 ಸಾವಿರ ಅನುದಾನ ನೀಡಲಾಗುತ್ತದೆ. ಸಮಿತಿಯ ನಿರ್ಧಾರದಂತೆ ಮಹಾಯೋಗಿ ವೇಮನ ಜಯಂತಿ ಹಾಗೂ ವೇಮನ ಜಯಂತಿಯನ್ನು ಒಟ್ಟಿಗೆ ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲು ತೀರ್ಮಾನಿಸಲಾಯಿತು.

ಜಯಂತಿಯಲ್ಲಿ ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಅವರ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ನೀಡಲಾಗುವುದು ಎಂದು ತಿಳಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗೀತಾ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಜಯಂತಿ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಕುಡಿಯುವ ನೀರನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಾಡಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸುದರ್ಶನ್ ಅವರು ಮಾತನಾಡಿ ಒಂದೊಂದು ಜಯಂತಿಗೆ ತಲಾ 50 ಸಾವಿರ ಅನುಧಾನ ಇದೆ. ಎರಡು ಜಯಂತಿಗಳನ್ನು ಒಟ್ಟಿಗೆ ಸೇರಿ ಆಚರಣೆ ಮಾಡಿದರೆ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುತ್ತದೆ. ಒಟ್ಟಿಗೆ ಆಚರಣೆ ಮಾಡಿದರೆ ಲಘು ಉಪಹಾರ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತದೆ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಲಾಗುವುದು ಎಂದರು.

ಸಮುದಾಯದ ಮುಖಂಡರು ಮಾತನಾಡಿ ಜಯಂತಿಗಳು ಜಾತಿಗಳಿಗೆ ಸೀಮಿತವಾಗಬಾರದು. ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಸಮುದಾಯಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago