ಮೈಸೂರು

ದೇಶದ ಸ್ವಚ್ಚತೆಗೆ ಪೌರ ಕಾರ್ಮಿಕರ ಪಾತ್ರ ದೊಡ್ಡದು : ಶಾಸಕ ಜಿ.ಡಿ ದೇವೇಗೌಡ

ಮೈಸೂರು : ದೇಶದ ಸ್ವಚ್ಚತೆ, ನೈರ್ಮಲ್ಯ ಹಾಗೂ ಜನರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ದೊಡ್ಡದು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ಹೂಟಗಳ್ಳಿಯ ಕಲ್ಯಾಣಮಂಟಪದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಬಸವೇಶ್ವರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರಿಗೆ ಉಚಿತ ಬಟ್ಟೆ ವಿತರಣೆ ಹಾಗೂ ಸಹಪಂಕ್ತಿ ಭೋಜನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

೧೨ನೇ ಶತಮಾನದಲ್ಲಿ ಬಸವಣ್ಣನವರು ಕಾಯಕವೇ ಕೈಲಾಸ ಎಂದರು. ಎಲ್ಲ ವರ್ಗವನ್ನು ಅಪ್ಪಿಕೊಂಡರು. ಅವರು ಹಾಕಿಕೊಟ್ಟ ಮಾರ್ಗವನ್ನು ಪೌರ ಕಾರ್ಮಿಕ ಸಮುದಾಯ ಅಕ್ಷರಶಃ ಪಾಲಿಸುತ್ತಿದೆ. ಜಾತಿ, ಧರ್ಮವನ್ನು ವಿರೋಧಿಸಿದ್ದ ಬಸವಣ್ಣ ಅವರು, ಮಾನವರೆಲ್ಲರೂ ಒಂದೇ ಎಂದು ಪ್ರತಿಪಾದಿಸಿದವರು ಎಂದು ಸಂತಸ ವ್ಯಕ್ತಪಡಿಸಿದರು. ಮೈಸೂರು ಭಾಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಹಾಗೂ ಇಲ್ಲಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು, ಸಾಮಾಜಿಕ ನ್ಯಾಯ ಹಾಗೂ ಬಡವರ ಏಳಿಗೆಗೆ ದುಡಿದವರು. ಅವರು ತಮ್ಮ ಆಡಳಿತಾವಽಯಲ್ಲಿ ಪೌರ ಕಾರ್ಮಿಕರಿಗೆ ವಿಶೇಷ ಗೌರವ ನೀಡಿದ್ದರು ಎಂದು ನುಡಿದರು. ಪೌರ ಕಾರ್ಮಿಕರ ಕೆಲಸ ಹಾಗೂ ಅವರ ಶ್ರಮವನ್ನು ಗುರುತಿಸಿ ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್ ಅವರು ಪೌರ ಕಾರ್ಮಿಕರಿಗೆ ಬಟ್ಟೆ ವಿತರಿಸುವುದರ ಜೊತೆಗೆ ಸಹಪಂಕ್ತಿ ಭೋಜನವನ್ನು ಏರ್ಪಡಿಸಿರುವುದು ಅರ್ಥಪೂರ್ಣ ಕಾರ್ಯಕ್ರಮ ಎಂದು ಶ್ಲಾಘಿಸಿದರು.

ಇದೇ ವೇಳೆ ಹೂಟಗಳ್ಳಿ ನಗರಸಭೆ ಮತ್ತು ಇಲವಾಲ ಹೋಬಳಿಯ ಎಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬಟ್ಟೆಗಳನ್ನು ವಿತರಿಸಲಾಯಿತು. ನಂತರ ಏರ್ಪಡಿಸಲಾಗಿದ್ದ ಸಹಪಂಕ್ತಿ ಭೋಜನದಲ್ಲಿ ಗಣ್ಯರೊಂದಿಗೆ ಪೌರ ಕಾರ್ಮಿಕರು ಭೋಜನ ಸವಿದರು. ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ ವಹಿಸಿದ್ದರು. ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದ ಎನ್.ಶ್ರೀನಿವಾಸ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಕವೀಶ್‌ಗೌಡ, ಸುರೇಶ್‌ಕುಮಾರ್, ಪ್ರಶಾಂತ್, ಹೂಟಗಳ್ಳಿ ನಗರಸಭೆ ಆಯುಕ್ತ ಚಂದ್ರಶೇಖರ್ ಮುಂತಾದವರು ಬಾಗವಹಿಸಿದ್ದರು. ಇದೇ ವೇಳೆ ಪೌರ ಕಾರ್ಮಿಕರಿಗೆ ಉಚಿತ ನೇತ್ರ ತಪಾಸಣಾ ಶಿಭಿರವನ್ನು ಆಯೋಜಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago