ಮೈಸೂರು: ಮನೋಶಕ್ತಿ ಮುಖಾಂತರ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೇ ಸೂರ್ಯನ ದೂರ, ಸೌರಮಂಡಲಗಳನ್ನು ಕಂಡು ಹಿಡಿದರು. ಈ ಆವಿಷ್ಕಾರವನ್ನು ವಿಜ್ಞಾನಿಗಳು ಹಾಗೂ ಖಗೋಳಜ್ಞಾನಿಗಳು ಒಪ್ಪಿಕೊಂಡಿದ್ದಾರೆ ಎಂದು ಪರಮಹಂಸ ಯೋಗ ಮಹಾವಿದ್ಯಾಲಯದ ಅಧ್ಯಕ್ಷ ಶಿವಪ್ರಕಾಶ್ ತಿಳಿಸಿದರು.
ನಗರದ ಸಯ್ಯಾಜಿ ರಾವ್ ರಸ್ತೆ, ತಿಲಕನಗರದ ಹೋಟೆಲ್ ರಿಯೊ ಮೆರಿಡಿಯನ್ ಅಲ್ಲಿ ಉಪಾಸನ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ‘‘ ಮನಸ್ಸಿನ ಮನೋಶಕ್ತಿ ಹೇಗೆ ಜಾಗೃತಿಗೊಳಿಸಬೇಕು ಎಂಬ ವಿಚಾರ ಕುರಿತು ಮಾರ್ಗದರ್ಶನ ನಡೆಯಲಿದೆ. ಎಲ್ಲ ಕಾರ್ಯಗಳಿಗೂ ಮೂಲ ಬಿಂದು ಮನಸ್ಸು, ಮನಸ್ಸನ್ನು ಜಾಗೃತಗೊಳಿಸಿದರೆ ಜಗತ್ತಿನ ಎಲ್ಲಾ ಜ್ಞಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮನಸ್ಸು ಉತ್ತಮವಾಗಿರಲು ಧ್ಯಾನ ಮುಖ್ಯ ಎಂದು ಮಾತನಾಡಿದರು.
ಬಳಿಕ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಬೇಕಾದರೆ, ಒಂದು ಹೃದಯ ಮತ್ತು ಮನಸ್ಸು ಎರಡು ಅಂಗಗಳು ಬಹುಮುಖ್ಯ, ನಾವು ಏನೇ ಕೆಲಸಗಳನ್ನು ಮಾಡಬೇಕಾದರೆ ಮನಸ್ಸು ಮುಖ್ಯ. ಮನಸ್ಸನ್ನ ನಿಯಂತ್ರಿಸಿದರೆ ಅತ್ತುತ್ತಮ ಕೆಲಸ ಸಾಧಿಸಲು ಸಾಧ್ಯ. ಮನಸ್ಸಿನ್ನು ನಿರ್ಗಹಿಸದಿದ್ದರೆ. ಯಾವುದೇ ಘಟನೆಗಳು ಬೇಕಾದರು ನಮಗೆ ತಿಳಿಯದಂತೆ ಘಟಿಸಿಬಿಡುತ್ತವೆ. ಹಾಗಾಗಿ ಮನಸ್ಸಿ ಹಿಡಿತ ಮುಖ್ಯವಾಗಿರಬೇಕು ಎಂದು ಅಭಿಪ್ರಾಯ ಪಟ್ಟರು.
ಬಳಿಕ ದೀಪಾಂಜಲಿ ಮಹಿಳಾ ಸಂಘದಿಂದ ಭಜನಾ ಕಾರ್ಯಕ್ರಮ ನೆರವೇರಿಸಲಾಯಿತು.
ಉಪಾಸನ ಫೌಂಡೇಷನ್ನ ಸಂಸ್ಥಾಪಕ ಸದ್ಗುರು ಶ್ರೀರಾಮ ಅವರು ಮನೋಶಕ್ತಿ ಕಾರ್ಯಗಾರ ನಡೆಸಿಕೊಟ್ಟರು.
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
ಮಂಡ್ಯ : ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…
ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು…