ಮೈಸೂರು

ಸೌರಮಂಡಲ ಕಂಡು ಹಿಡಿದ ಋಷಿಮುನಿಗಳು: ಶಿವಪ್ರಕಾಶ್‌ ಅಭಿಮತ

ಮೈಸೂರು: ಮನೋಶಕ್ತಿ ಮುಖಾಂತರ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೇ ಸೂರ್ಯನ ದೂರ, ಸೌರಮಂಡಲಗಳನ್ನು ಕಂಡು ಹಿಡಿದರು. ಈ ಆವಿಷ್ಕಾರವನ್ನು ವಿಜ್ಞಾನಿಗಳು ಹಾಗೂ ಖಗೋಳಜ್ಞಾನಿಗಳು ಒಪ್ಪಿಕೊಂಡಿದ್ದಾರೆ ಎಂದು ಪರಮಹಂಸ ಯೋಗ ಮಹಾವಿದ್ಯಾಲಯದ ಅಧ್ಯಕ್ಷ ಶಿವಪ್ರಕಾಶ್ ತಿಳಿಸಿದರು.

ನಗರದ ಸಯ್ಯಾಜಿ ರಾವ್ ರಸ್ತೆ, ತಿಲಕನಗರದ ಹೋಟೆಲ್ ರಿಯೊ ಮೆರಿಡಿಯನ್ ಅಲ್ಲಿ ಉಪಾಸನ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ‘‘ ಮನಸ್ಸಿನ ಮನೋಶಕ್ತಿ ಹೇಗೆ ಜಾಗೃತಿಗೊಳಿಸಬೇಕು ಎಂಬ ವಿಚಾರ ಕುರಿತು ಮಾರ್ಗದರ್ಶನ ನಡೆಯಲಿದೆ. ಎಲ್ಲ ಕಾರ್ಯಗಳಿಗೂ ಮೂಲ ಬಿಂದು ಮನಸ್ಸು, ಮನಸ್ಸನ್ನು ಜಾಗೃತಗೊಳಿಸಿದರೆ ಜಗತ್ತಿನ ಎಲ್ಲಾ ಜ್ಞಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮನಸ್ಸು ಉತ್ತಮವಾಗಿರಲು ಧ್ಯಾನ ಮುಖ್ಯ ಎಂದು ಮಾತನಾಡಿದರು.

ಬಳಿಕ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಬೇಕಾದರೆ, ಒಂದು ಹೃದಯ ಮತ್ತು ಮನಸ್ಸು ಎರಡು ಅಂಗಗಳು ಬಹುಮುಖ್ಯ, ನಾವು ಏನೇ ಕೆಲಸಗಳನ್ನು ಮಾಡಬೇಕಾದರೆ ಮನಸ್ಸು ಮುಖ್ಯ. ಮನಸ್ಸನ್ನ ನಿಯಂತ್ರಿಸಿದರೆ ಅತ್ತುತ್ತಮ ಕೆಲಸ ಸಾಧಿಸಲು ಸಾಧ್ಯ. ಮನಸ್ಸಿನ್ನು ನಿರ್ಗಹಿಸದಿದ್ದರೆ. ಯಾವುದೇ ಘಟನೆಗಳು ಬೇಕಾದರು ನಮಗೆ ತಿಳಿಯದಂತೆ ಘಟಿಸಿಬಿಡುತ್ತವೆ. ಹಾಗಾಗಿ ಮನಸ್ಸಿ ಹಿಡಿತ ಮುಖ್ಯವಾಗಿರಬೇಕು ಎಂದು ಅಭಿಪ್ರಾಯ ಪಟ್ಟರು.

ಬಳಿಕ ದೀಪಾಂಜಲಿ ಮಹಿಳಾ ಸಂಘದಿಂದ ಭಜನಾ ಕಾರ್ಯಕ್ರಮ ನೆರವೇರಿಸಲಾಯಿತು.

ಉಪಾಸನ ಫೌಂಡೇಷನ್‌ನ ಸಂಸ್ಥಾಪಕ ಸದ್ಗುರು ಶ್ರೀರಾಮ ಅವರು ಮನೋಶಕ್ತಿ ಕಾರ್ಯಗಾರ ನಡೆಸಿಕೊಟ್ಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago