ಮೈಸೂರು: ಮನೋಶಕ್ತಿ ಮುಖಾಂತರ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೇ ಸೂರ್ಯನ ದೂರ, ಸೌರಮಂಡಲಗಳನ್ನು ಕಂಡು ಹಿಡಿದರು. ಈ ಆವಿಷ್ಕಾರವನ್ನು ವಿಜ್ಞಾನಿಗಳು ಹಾಗೂ ಖಗೋಳಜ್ಞಾನಿಗಳು ಒಪ್ಪಿಕೊಂಡಿದ್ದಾರೆ ಎಂದು ಪರಮಹಂಸ ಯೋಗ ಮಹಾವಿದ್ಯಾಲಯದ ಅಧ್ಯಕ್ಷ ಶಿವಪ್ರಕಾಶ್ ತಿಳಿಸಿದರು.
ನಗರದ ಸಯ್ಯಾಜಿ ರಾವ್ ರಸ್ತೆ, ತಿಲಕನಗರದ ಹೋಟೆಲ್ ರಿಯೊ ಮೆರಿಡಿಯನ್ ಅಲ್ಲಿ ಉಪಾಸನ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ‘‘ ಮನಸ್ಸಿನ ಮನೋಶಕ್ತಿ ಹೇಗೆ ಜಾಗೃತಿಗೊಳಿಸಬೇಕು ಎಂಬ ವಿಚಾರ ಕುರಿತು ಮಾರ್ಗದರ್ಶನ ನಡೆಯಲಿದೆ. ಎಲ್ಲ ಕಾರ್ಯಗಳಿಗೂ ಮೂಲ ಬಿಂದು ಮನಸ್ಸು, ಮನಸ್ಸನ್ನು ಜಾಗೃತಗೊಳಿಸಿದರೆ ಜಗತ್ತಿನ ಎಲ್ಲಾ ಜ್ಞಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮನಸ್ಸು ಉತ್ತಮವಾಗಿರಲು ಧ್ಯಾನ ಮುಖ್ಯ ಎಂದು ಮಾತನಾಡಿದರು.
ಬಳಿಕ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಬೇಕಾದರೆ, ಒಂದು ಹೃದಯ ಮತ್ತು ಮನಸ್ಸು ಎರಡು ಅಂಗಗಳು ಬಹುಮುಖ್ಯ, ನಾವು ಏನೇ ಕೆಲಸಗಳನ್ನು ಮಾಡಬೇಕಾದರೆ ಮನಸ್ಸು ಮುಖ್ಯ. ಮನಸ್ಸನ್ನ ನಿಯಂತ್ರಿಸಿದರೆ ಅತ್ತುತ್ತಮ ಕೆಲಸ ಸಾಧಿಸಲು ಸಾಧ್ಯ. ಮನಸ್ಸಿನ್ನು ನಿರ್ಗಹಿಸದಿದ್ದರೆ. ಯಾವುದೇ ಘಟನೆಗಳು ಬೇಕಾದರು ನಮಗೆ ತಿಳಿಯದಂತೆ ಘಟಿಸಿಬಿಡುತ್ತವೆ. ಹಾಗಾಗಿ ಮನಸ್ಸಿ ಹಿಡಿತ ಮುಖ್ಯವಾಗಿರಬೇಕು ಎಂದು ಅಭಿಪ್ರಾಯ ಪಟ್ಟರು.
ಬಳಿಕ ದೀಪಾಂಜಲಿ ಮಹಿಳಾ ಸಂಘದಿಂದ ಭಜನಾ ಕಾರ್ಯಕ್ರಮ ನೆರವೇರಿಸಲಾಯಿತು.
ಉಪಾಸನ ಫೌಂಡೇಷನ್ನ ಸಂಸ್ಥಾಪಕ ಸದ್ಗುರು ಶ್ರೀರಾಮ ಅವರು ಮನೋಶಕ್ತಿ ಕಾರ್ಯಗಾರ ನಡೆಸಿಕೊಟ್ಟರು.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…