ಮೈಸೂರು : ಚಾಲಕನ ಅರಿವಿಗೆ ಬಾರದೇ ಬಾಲಕಿ ಮೇಲೆ ಶಾಲಾ ಬಸ್ ಹಾದು ಹೋದ ಘಟನೆ ಜಿಲ್ಲೆಯ ಹುಣಸೂರು ಪಟ್ಟಣದ ಮಂಜುನಾಥ ನಗರದಲ್ಲಿ ನಡೆದಿದೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.
ಹುಣಸೂರು ಪಟ್ಟಣದ ಮಂಜುನಾಥ ನಗರದ ನಿವಾಸಿಯಾಗಿರುವ ಬಾಲಕಿ ಬಸ್ ಇಳಿದು, ವಾಹನದ ಮುಂಭಾಗದಿಂದ ರಸ್ತೆ ದಾಟಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಬಸ್ ಮುಂದೆ ಚಲಿಸಿದೆ. ಬಾಲಕಿಯನ್ನು ಗಮನಿಸದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಬಾಲಕಿಯ ಮೈಮೇಲೆ ಹಾದು ಹೋಗಿದೆ.
ಇದಾದ ನಂತರ ಘಟನೆ ತಿಳಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಆಕೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ಚಾಲಕನ ವಿರುದ್ಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…