Living together couple murders 2 children
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಧಾ ಕೊಲೆಯಾದ ದುರ್ದೈವಿಯಾಗಿದ್ದು, ಶಿವರುದ್ರಪ್ಪ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಪರಪುರುಷನ ಸಂಗ ಮಾಡಿದ್ದ ತಾಯಿಗೆ ಶಿವರುದ್ರಪ್ಪ ಪದೇ ಪದೇ ಬುದ್ದಿವಾದ ಹೇಳುತ್ತಿದ್ದ. ಆದರೂ ತಾಯಿ ಸುಧಾ ಮಾತ್ರ ಪರ ಪುರುಷನ ಸಹವಾಸ ಬಿಡಲು ಒಪ್ಪುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಿಗ್ಗೆ ಸುಧಾರನ್ನು ಮಗ ಶಿವರುದ್ರಪ್ಪ ಕೊಲೆ ಮಾಡಿದ್ದಾನೆ.
ಮೊದಲಿಗೆ ತೀವ್ರ ಹಲ್ಲೆಗೊಳಗಾಗಿದ್ದ ಸುಧಾರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆಯೊಯ್ದಿದ್ದರು. ಈ ವೇಳೆ ಅಡ್ಡಬಂದ ಪುತ್ರ ತಾನೇ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಕಣಿಯನಹುಂಡಿ ಸಮೀಪದ ತೋಟದಲ್ಲಿ ತಾಯಿಯನ್ನು ಸುಟ್ಟುಹಾಕಿ ಎಸ್ಕೇಪ್ ಆಗಿದ್ದ. ಈ ವೇಳೆ ಆರೋಪಿಗೆ ಚಿಕ್ಕಪ್ಪನ ಮಕ್ಕಳಾದ ಆಕಾಶ್ ಹಾಗೂ ಅಭಿ ಎಂಬುವವರು ಕೂಡ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ಭೇದಿಸಿದ ಜಯಪುರ ಠಾಣೆ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…