ಮೈಸೂರು/ಎಚ್ಡಿ ಕೋಟೆ: ತಮ್ಮ ಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮಧ್ಯೆಯೇ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಎಚ್ಡಿ ಕೋಟೆ ತಾಲೂಕಿನ ಕೆ. ಎಡತೊರೆ ಗ್ರಾಮದ ಹಾಡಿಯ ಜನರು ರಸ್ತೆಯಲ್ಲಿಯೇ ನಾಟಿ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಎಡತೊರೆ ಹಾಡಿ ಮೂಲ ಸೌಕರ್ಯದಿಂದ ವಂಚಿತರಾಗಿದೆ. ಗ್ರಾಮಕ್ಕೆ ಸಮರ್ಪಕ ರಸ್ತೆಯಿಲ್ಲ. ಇಂದಿಗೂ ಕೂಡಾ ಸರ್ಕಾರಿ ಬಸ್ ಸೌಲಭ್ಯ ಸಿಗದೇ ಇರುವುದು ಅಲ್ಲಿನ ಜನರ ಕೆಂಗಣ್ಣಿಗೆ ಗುರಿ ಮಾಡುವಂತೆ ಮಾಡಿದೆ.
ಈ ಸಂಬಂಧ ರಸ್ತ, ನೀರು, ಸಾರಿಗೆ ಸೇರಿದಂತೆ ಹಲವು ಮೂಲಭೂತ ಸೌಕರ್ಯ ನೀಡುವಂತೆ ಕಳೆದ ಒಂದು ವರ್ಷದಿಂದ ಅಲ್ಲಿನ ಹಾಡಿ ಜನರು ಅಧಿಕಾರಿಗಳಿಗೆ ಮಾಹಿತಿ ನೀಡಿಯೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಕೆಸರು ಗದ್ದೆಯಂತಾಗಿದ್ದ ರಸ್ತೆಯ ಮೇಲೆ ನಾಟಿ ಮಾಡುವ ಮೂಲಕ ರಸ್ತೆ ಅಭಿವೃದ್ದಿಗಾಗಿ ಜನರು ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…