ಮೈಸೂರು: ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮದ್ಯಾಹ್ನಕ್ಕೆ ನಿಗದಿಪಡಿಸಿರುವ ಬಗ್ಗೆ ಯುವ ಬ್ರಿಗೇಡ್ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ನಮಾಜ್ಗಾಗಿ ವೇಳೆ ಬದಲಾಯಿಸಲಾಗಿದೆಯೇ ಎಂದು ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಕ್ರವರ್ತಿ ಸೂಲಿಬೆಲೆ ಅವನೊಬ್ಬ ತಲೆಹರಟೆ, ಅವನಿಗೆ ಮಾನ ಮರ್ಯಾದೆ ಇದಿಯಾ? ಸಮಾಜದಲ್ಲಿ ವಿಷ ಬಿತ್ತುವ ಕೆಲಸವನ್ನು ಸೂಲಿಬೆಲೆ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡಸಿದ್ದಾರೆ.
ನಗರದಲ್ಲಿಂದು ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಯ ಎಲ್ಲ ಪರೀಕ್ಷೆಗಳು ಬೆಳಗಿನ ಸೆಷನ್ ನಲ್ಲಿ ನಡೆಸಲಾಗುತ್ತಿದೆ ಅದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ ಆಗಿರುವುದರಿಂದ ನಮಾಜಿಗೋಸ್ಕರ ವೇಳೆ ಬದಲಾಯಿಸಲಾಗಿದೆಯೇ ಅಂತ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಇದರಿಂದಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಏಕವಚನದಲ್ಲೇ ಛಾಡಿಸಿದರು.
ಕನಿಷ್ಟ ಸಾಮಾನ್ಯ ಜ್ಞಾನವನ್ನಾದರೂ ಆವರು ಪ್ರದರ್ಶಿಸಬೇಕಿತ್ತು, ಅವತ್ತು ಯಾಕೆ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಅಂತ ಯೋಚಿಸುವ ವ್ಯವಧಾನವೂ ಅವರಿಗಿಲ್ಲ, ಅಸಲು ವಿಷಯವೇನೆಂದರೆ ಅದೇ ದಿನ ದ್ವಿತೀಯ ಪರೀಕ್ಷೆಗಳು ಆರಂಭವಾಗಲಿದ್ದು, ಬೆಳಗ್ಗೆ ಆ ಪರೀಕ್ಷೆ ನಡೆಯಲಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.
ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಈ ರೀತಿಯ ಭಾವನಾತ್ಮಕ ವಿಷಯಗಳಿಂದ ಜನರ ತಲೆಕೆಡಿಸುವುದನ್ನು ನಿಲ್ಲಿಸಬೇಕು, ಕರ್ನಾಟಕದಲ್ಲಿ ಅದೆಲ್ಲ ನಡೆಯಲ್ಲ. ರಾಜ್ಯದಲ್ಲಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ರಾಜಕೀಯ ನಡೆಸಿದರೇ ಜನರು ಇನ್ನೂ ಹೆಚ್ಚಿನ ಶಿಕ್ಷೆ ನೀಡುತ್ತಾರೆ ಎಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…