ಮೈಸೂರು

ಸಮಾವೇಶ ನಡೆದ ಮೈದಾನವನ್ನು ಸ್ವಚ್ಛಗೊಳಿಸಿದ ಯದುವೀರ್‌ ದಂಪತಿ !

ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಒಡೆಯರ್ ಅವರೊಂದಿಗೆ ಸೋಮವಾರ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಮೈದಾನವನ್ನು ಸ್ವಚ್ಛಗೊಳಿಸಲು ಸಹಾಯ ಹಸ್ತ ಚಾಚಿದರು.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಸಮಾವೇಶಕ್ಕೆ ಸೇರಿದ್ದ ಜನ ಜಂಗುಳಿಯಿಂದ ಇಡೀ ಮಹಾರಾಜ ಕಾಲೇಜು ಮೈದಾನ ಕಸಭರಿತವಾಗಿತ್ತು. ಅಲ್ಲಲ್ಲಿ ಬಿದ್ದಿದ್ದ ನೀರಿನ ಬಾಟಲಿಗಳು, ಪ್ಲಾಸ್ಟಿಕ್‌ಗಳು, ಕಸ-ಕಡ್ಡಿಗಳನ್ನ ಚೀಲಕ್ಕೆ ತುಂಬಿಸಿ ಹೊರಗೆ ಸಾಗಿಸಲು ಯದುವೀರ್ ಹಾಗೂ ತ್ರಿಷಿಕಾ ಒಡೆಯರ್ ಅವರೊಂದಿಗೆ ಅವರ ಅಭಿವಾನಿಗಳು ಮತ್ತು ನಗರಪಾಲಿಕೆ ಸಿಬ್ಬಂದಿಗಳು ಸೇರಿ ಸ್ವಚ್ಚಗೊಳಿಸಿದರು. ಬಳಿಕ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕಾರ್ಮಿಕರಿಗೆ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು.

ತ್ರಿಷಿಕಾ ಅವರೊಂದಿಗೆ ಯದುವೀರ್ ಕೂಡ ತ್ಯಾಜ್ಯವನ್ನು ಆರಿಸುತ್ತಿದ್ದದು ಎಲ್ಲರ ಗಮನ ಸೆಳೆಯಿತು. ಕೆಲವು ಸ್ವಯಂ ಸೇವಕರು ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಈ ವೇಳೆ ಮಾತನಾಡಿದ ಯದುವೀರ್ ಅವರು ನಗರವು ಯಾವಾಗಲೂ ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಮೋದಿಯವರ ಕಾರ್ಯಕ್ರಮದ ನಂತರ ಮೈದಾನವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ ಮತ್ತು ನಗರವನ್ನು ಸ್ವಚ್ಛವಾಗಿಡುವುದು ನಮ್ಮ ಪ್ರಧಾನಮಂತ್ರಿ ಉಪಕ್ರಮದ ಸ್ವಚ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿದೆ,
ಮೈಸೂರು ನಗರದ ಸ್ವಚ್ಛತೆಗೆ ನನ್ನ ಮೊದಲ ಆದ್ಯತೆ’ ಇದು ಇನ್ನೂ ಮುಂದೆಯೂ ಮುಂದುವರೆಯುತ್ತದೆ ಎಂದರು.

ಯದುವೀರ್ ಸ್ವಚ್ಛತಾ ಕಾರ್ಯಕ್ಕೆ ಮೈದಾನಕ್ಕೆ ಬಂದಿದ್ದನ್ನು ಕಂಡ ಮುಂಜಾನೆ ವಾಯು ವಿಹಾರಕ್ಕೆ ಬಂದಿದ್ದ ಸಾರ್ವಜನಿಕರು ಆಶ್ಚರ್ಯಚಕಿತರಾಗಿ ಹತ್ತಿರಕ್ಕೆ ಬಂದು ಯದುವೀರ್ ಅವರನ್ನು ಮಾತನಾಡಿಸಿ, ಅವರು ಮೈದಾನವನ್ನು ಸ್ವಚ್ಛಗೊಳಿಸುವುದನ್ನು ನೋಡಿ ಸಂತೋಷ ವ್ಯಕ್ತಪಡಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

30 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

36 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

39 mins ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

10 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago