ಮೈಸೂರು

ಸಮಾವೇಶ ನಡೆದ ಮೈದಾನವನ್ನು ಸ್ವಚ್ಛಗೊಳಿಸಿದ ಯದುವೀರ್‌ ದಂಪತಿ !

ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಒಡೆಯರ್ ಅವರೊಂದಿಗೆ ಸೋಮವಾರ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಮೈದಾನವನ್ನು ಸ್ವಚ್ಛಗೊಳಿಸಲು ಸಹಾಯ ಹಸ್ತ ಚಾಚಿದರು.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಸಮಾವೇಶಕ್ಕೆ ಸೇರಿದ್ದ ಜನ ಜಂಗುಳಿಯಿಂದ ಇಡೀ ಮಹಾರಾಜ ಕಾಲೇಜು ಮೈದಾನ ಕಸಭರಿತವಾಗಿತ್ತು. ಅಲ್ಲಲ್ಲಿ ಬಿದ್ದಿದ್ದ ನೀರಿನ ಬಾಟಲಿಗಳು, ಪ್ಲಾಸ್ಟಿಕ್‌ಗಳು, ಕಸ-ಕಡ್ಡಿಗಳನ್ನ ಚೀಲಕ್ಕೆ ತುಂಬಿಸಿ ಹೊರಗೆ ಸಾಗಿಸಲು ಯದುವೀರ್ ಹಾಗೂ ತ್ರಿಷಿಕಾ ಒಡೆಯರ್ ಅವರೊಂದಿಗೆ ಅವರ ಅಭಿವಾನಿಗಳು ಮತ್ತು ನಗರಪಾಲಿಕೆ ಸಿಬ್ಬಂದಿಗಳು ಸೇರಿ ಸ್ವಚ್ಚಗೊಳಿಸಿದರು. ಬಳಿಕ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕಾರ್ಮಿಕರಿಗೆ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು.

ತ್ರಿಷಿಕಾ ಅವರೊಂದಿಗೆ ಯದುವೀರ್ ಕೂಡ ತ್ಯಾಜ್ಯವನ್ನು ಆರಿಸುತ್ತಿದ್ದದು ಎಲ್ಲರ ಗಮನ ಸೆಳೆಯಿತು. ಕೆಲವು ಸ್ವಯಂ ಸೇವಕರು ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಈ ವೇಳೆ ಮಾತನಾಡಿದ ಯದುವೀರ್ ಅವರು ನಗರವು ಯಾವಾಗಲೂ ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಮೋದಿಯವರ ಕಾರ್ಯಕ್ರಮದ ನಂತರ ಮೈದಾನವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ ಮತ್ತು ನಗರವನ್ನು ಸ್ವಚ್ಛವಾಗಿಡುವುದು ನಮ್ಮ ಪ್ರಧಾನಮಂತ್ರಿ ಉಪಕ್ರಮದ ಸ್ವಚ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿದೆ,
ಮೈಸೂರು ನಗರದ ಸ್ವಚ್ಛತೆಗೆ ನನ್ನ ಮೊದಲ ಆದ್ಯತೆ’ ಇದು ಇನ್ನೂ ಮುಂದೆಯೂ ಮುಂದುವರೆಯುತ್ತದೆ ಎಂದರು.

ಯದುವೀರ್ ಸ್ವಚ್ಛತಾ ಕಾರ್ಯಕ್ಕೆ ಮೈದಾನಕ್ಕೆ ಬಂದಿದ್ದನ್ನು ಕಂಡ ಮುಂಜಾನೆ ವಾಯು ವಿಹಾರಕ್ಕೆ ಬಂದಿದ್ದ ಸಾರ್ವಜನಿಕರು ಆಶ್ಚರ್ಯಚಕಿತರಾಗಿ ಹತ್ತಿರಕ್ಕೆ ಬಂದು ಯದುವೀರ್ ಅವರನ್ನು ಮಾತನಾಡಿಸಿ, ಅವರು ಮೈದಾನವನ್ನು ಸ್ವಚ್ಛಗೊಳಿಸುವುದನ್ನು ನೋಡಿ ಸಂತೋಷ ವ್ಯಕ್ತಪಡಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago