ಮೈಸೂರು

ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ ಮಾಡಿದ ಯುವಕ

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್‌ ದೀಕ್ಷಿತ್‌ ಅವರ ಮೇಲೆ ಸಿದ್ಧಾಂತ್ ಎಂಬ ಯುವಕ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಅರ್ಚಕ ದೇವಪ್ರಸಾದ್‌ ದೀಕ್ಷಿತ್‌ ಅವರ ಮೇಲೆ ಹಲ್ಲೆ ಮಾಡಿರುವ ಸಿದ್ಧಾಂತ್‌ ಎಂಬಾತ ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್‌ ಮಗ ಎಂದು ಗುರುತಿಸಲಾಗಿದೆ. ಅಲ್ಲದೇ ದೇವಪ್ರಸಾದ್‌ ದೀಕ್ಷಿತ್‌ ಅವರ ಕುಟುಂಬ ಸಿದ್ಧಾರ್ಥನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು, ಇದೇ ಬಡಾವಣೆಯಲ್ಲಿ ಪ್ರೊ.ಸಂತೋಷ್‌ ಎಂಬುವವರ ಕುಟುಂಬವೂ ಇದೆ.

ಈ ಘಟನೆಗೆ ಕಾರಣವಾಗಿರುವ ಸಿದ್ಧಾಂತ್‌ ಸೋಮವಾರ(ಫೆಬ್ರವರಿ.10) ರಂದು ದೇವಪ್ರಸಾದ್‌ ಅವರ ಮನೆಗೆ ರಾತ್ರಿ ೯ ಗಂಟೆಗೆ ನುಗ್ಗಿ ಹಣ ನೀಡುವಂತೆ ಪೀಡಿಸಿದ್ದಾನೆ. ಆ ವೇಳೆ ಹಣ ನೀಡಲು ನಿರಾಕರಿಸಿದ ದೇವಪ್ರಸಾದ್‌ ಅವರ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದಾನೆ. ಅದೇ ಸಮಯಕ್ಕೆ ಮನೆಗೆ ಬಂದ ಅರ್ಚಕರ ಮಗ ಸುದೇವ್‌ ಎಂಬುವವರು ನೆರೆಹೊರೆಯವರ ಸಹಾಯ ಪಡೆದು ಸಿದ್ಧಾಂತ್‌ ಅನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನೂ ಮಗನ ಹುಚ್ಚಾಟದ ವಿಚಾರವನ್ನು ತಿಳಿದ ಪ್ರೊ.ಸಂತೋಷ್‌ ಮತ್ತು ಅವರ ಪತ್ನಿ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್‌ ದೀಕ್ಷಿತ್‌ರ ಬಳಿ ಗೋಳಾಟ ಮಾಡಿದ್ದರಿಂದ ಅವರು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

8 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

8 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

8 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

8 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

8 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

8 hours ago