ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಸಿದ್ಧಾಂತ್ ಎಂಬ ಯುವಕ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿರುವ ಸಿದ್ಧಾಂತ್ ಎಂಬಾತ ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್ ಮಗ ಎಂದು ಗುರುತಿಸಲಾಗಿದೆ. ಅಲ್ಲದೇ ದೇವಪ್ರಸಾದ್ ದೀಕ್ಷಿತ್ ಅವರ ಕುಟುಂಬ ಸಿದ್ಧಾರ್ಥನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು, ಇದೇ ಬಡಾವಣೆಯಲ್ಲಿ ಪ್ರೊ.ಸಂತೋಷ್ ಎಂಬುವವರ ಕುಟುಂಬವೂ ಇದೆ.
ಈ ಘಟನೆಗೆ ಕಾರಣವಾಗಿರುವ ಸಿದ್ಧಾಂತ್ ಸೋಮವಾರ(ಫೆಬ್ರವರಿ.10) ರಂದು ದೇವಪ್ರಸಾದ್ ಅವರ ಮನೆಗೆ ರಾತ್ರಿ ೯ ಗಂಟೆಗೆ ನುಗ್ಗಿ ಹಣ ನೀಡುವಂತೆ ಪೀಡಿಸಿದ್ದಾನೆ. ಆ ವೇಳೆ ಹಣ ನೀಡಲು ನಿರಾಕರಿಸಿದ ದೇವಪ್ರಸಾದ್ ಅವರ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದಾನೆ. ಅದೇ ಸಮಯಕ್ಕೆ ಮನೆಗೆ ಬಂದ ಅರ್ಚಕರ ಮಗ ಸುದೇವ್ ಎಂಬುವವರು ನೆರೆಹೊರೆಯವರ ಸಹಾಯ ಪಡೆದು ಸಿದ್ಧಾಂತ್ ಅನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇನ್ನೂ ಮಗನ ಹುಚ್ಚಾಟದ ವಿಚಾರವನ್ನು ತಿಳಿದ ಪ್ರೊ.ಸಂತೋಷ್ ಮತ್ತು ಅವರ ಪತ್ನಿ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್ ದೀಕ್ಷಿತ್ರ ಬಳಿ ಗೋಳಾಟ ಮಾಡಿದ್ದರಿಂದ ಅವರು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…