ಮೈಸೂರು

ನಾಡಹಬ್ಬ ದಸರಾಗೆ ಚಾಮರಾಜೇಂದ್ರ ಮೃಗಾಲಯ ಮತ್ತಷ್ಟು ಪ್ರವಾಸಿ ಸ್ನೇಹಿ

ಮೈಸೂರು : ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಅಧ್ಯಕ್ಷ ಶಿವಕುಮಾರ್.

ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ಉದ್ದೇಶದಿಂದ ಆನ್ಲೈನ್ನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೃಗಾಲಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮಾಹಿತಿ ಜಾಲಕ್ಕೆ ಒಳಪಡಿಸಲಾಗಿದೆ. ಮುಂಬರುವ ದಸರಾ ಮಹೋತ್ಸವವನ್ನು ಗುರಿಯಾಗಿಸಿಕೊಂಡು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯವನ್ನು ಮತ್ತಷ್ಟು ಪ್ರವಾಸಿ ಸ್ನೇಹಿಯಾಗಿಸಲು ಕ್ರಮಕೈಗೊಳ್ಳಲಾಗವುದು ಎಂದು ರಾಜ್ಯ ಮೃಗಾಲಯಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದರು. ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ನಿತ್ಯವೂ ಸ್ಥಳೀಯರಿಗಿಂತ ಹೆಚ್ಚಾಗಿ ಅನ್ಯ ರಾಜ್ಯ ಸೇರಿದಂತೆ ಪ್ರಪಂಚದ ನಾನಾ ಮೂಲೆಗಳಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಕಳೆದ ಎರಡು ವರ್ಷಗಳಲ್ಲಿ ಮೃಗಾಲಯದ ನಿರ್ವಹಣೆಗೆ ಕೊಂಚ ಹಿನ್ನಡೆಯಾದರೂ ಸಚಿವ ಎಸ್.ಟಿ. ಸೋಮಶೇಖರ್ ಅವರ ಸಹಕಾರ ಹಾಗೂ ದಾನಿಗಳ ನೆರವಿನಿಂದ ಹೆಚ್ಚಿನ ತೊಂದರೆಯಾಗಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಸ್ವಚ್ಛತೆ, ಪ್ರಾಣಿಗಳ ನಿರ್ವಹಣೆ, ಆಹಾರ ಪದಾರ್ಥಗಳ ಖರೀದಿ, ವಿತರಣೆ, ಪ್ರವಾಸಿ ಸ್ನೇಹಿ ವಾತಾವರಣ ಕಂಡುಬರುತ್ತಿದೆ. ಸದ್ಯ ದಸರಾ ಮಹೋತ್ಸವ ಸಮೀಪಿಸುತ್ತಿರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

7 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

7 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

7 hours ago