ಮೈಸೂರು

ನಾಡಹಬ್ಬ ದಸರಾಗೆ ಚಾಮರಾಜೇಂದ್ರ ಮೃಗಾಲಯ ಮತ್ತಷ್ಟು ಪ್ರವಾಸಿ ಸ್ನೇಹಿ

ಮೈಸೂರು : ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಅಧ್ಯಕ್ಷ ಶಿವಕುಮಾರ್.

ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ಉದ್ದೇಶದಿಂದ ಆನ್ಲೈನ್ನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೃಗಾಲಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮಾಹಿತಿ ಜಾಲಕ್ಕೆ ಒಳಪಡಿಸಲಾಗಿದೆ. ಮುಂಬರುವ ದಸರಾ ಮಹೋತ್ಸವವನ್ನು ಗುರಿಯಾಗಿಸಿಕೊಂಡು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯವನ್ನು ಮತ್ತಷ್ಟು ಪ್ರವಾಸಿ ಸ್ನೇಹಿಯಾಗಿಸಲು ಕ್ರಮಕೈಗೊಳ್ಳಲಾಗವುದು ಎಂದು ರಾಜ್ಯ ಮೃಗಾಲಯಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದರು. ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ನಿತ್ಯವೂ ಸ್ಥಳೀಯರಿಗಿಂತ ಹೆಚ್ಚಾಗಿ ಅನ್ಯ ರಾಜ್ಯ ಸೇರಿದಂತೆ ಪ್ರಪಂಚದ ನಾನಾ ಮೂಲೆಗಳಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಕಳೆದ ಎರಡು ವರ್ಷಗಳಲ್ಲಿ ಮೃಗಾಲಯದ ನಿರ್ವಹಣೆಗೆ ಕೊಂಚ ಹಿನ್ನಡೆಯಾದರೂ ಸಚಿವ ಎಸ್.ಟಿ. ಸೋಮಶೇಖರ್ ಅವರ ಸಹಕಾರ ಹಾಗೂ ದಾನಿಗಳ ನೆರವಿನಿಂದ ಹೆಚ್ಚಿನ ತೊಂದರೆಯಾಗಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಸ್ವಚ್ಛತೆ, ಪ್ರಾಣಿಗಳ ನಿರ್ವಹಣೆ, ಆಹಾರ ಪದಾರ್ಥಗಳ ಖರೀದಿ, ವಿತರಣೆ, ಪ್ರವಾಸಿ ಸ್ನೇಹಿ ವಾತಾವರಣ ಕಂಡುಬರುತ್ತಿದೆ. ಸದ್ಯ ದಸರಾ ಮಹೋತ್ಸವ ಸಮೀಪಿಸುತ್ತಿರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.

andolana

Recent Posts

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

37 mins ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

3 hours ago