ಮೈಸೂರು

ನಾಡಹಬ್ಬ ದಸರಾಗೆ ಚಾಮರಾಜೇಂದ್ರ ಮೃಗಾಲಯ ಮತ್ತಷ್ಟು ಪ್ರವಾಸಿ ಸ್ನೇಹಿ

ಮೈಸೂರು : ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಅಧ್ಯಕ್ಷ ಶಿವಕುಮಾರ್.

ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ಉದ್ದೇಶದಿಂದ ಆನ್ಲೈನ್ನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೃಗಾಲಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮಾಹಿತಿ ಜಾಲಕ್ಕೆ ಒಳಪಡಿಸಲಾಗಿದೆ. ಮುಂಬರುವ ದಸರಾ ಮಹೋತ್ಸವವನ್ನು ಗುರಿಯಾಗಿಸಿಕೊಂಡು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯವನ್ನು ಮತ್ತಷ್ಟು ಪ್ರವಾಸಿ ಸ್ನೇಹಿಯಾಗಿಸಲು ಕ್ರಮಕೈಗೊಳ್ಳಲಾಗವುದು ಎಂದು ರಾಜ್ಯ ಮೃಗಾಲಯಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದರು. ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ನಿತ್ಯವೂ ಸ್ಥಳೀಯರಿಗಿಂತ ಹೆಚ್ಚಾಗಿ ಅನ್ಯ ರಾಜ್ಯ ಸೇರಿದಂತೆ ಪ್ರಪಂಚದ ನಾನಾ ಮೂಲೆಗಳಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಕಳೆದ ಎರಡು ವರ್ಷಗಳಲ್ಲಿ ಮೃಗಾಲಯದ ನಿರ್ವಹಣೆಗೆ ಕೊಂಚ ಹಿನ್ನಡೆಯಾದರೂ ಸಚಿವ ಎಸ್.ಟಿ. ಸೋಮಶೇಖರ್ ಅವರ ಸಹಕಾರ ಹಾಗೂ ದಾನಿಗಳ ನೆರವಿನಿಂದ ಹೆಚ್ಚಿನ ತೊಂದರೆಯಾಗಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಸ್ವಚ್ಛತೆ, ಪ್ರಾಣಿಗಳ ನಿರ್ವಹಣೆ, ಆಹಾರ ಪದಾರ್ಥಗಳ ಖರೀದಿ, ವಿತರಣೆ, ಪ್ರವಾಸಿ ಸ್ನೇಹಿ ವಾತಾವರಣ ಕಂಡುಬರುತ್ತಿದೆ. ಸದ್ಯ ದಸರಾ ಮಹೋತ್ಸವ ಸಮೀಪಿಸುತ್ತಿರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.

andolana

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

6 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

8 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

8 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

13 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

14 hours ago