ಮೈಸೂರು

ನಾಡಹಬ್ಬ ದಸರಾಗೆ ಚಾಮರಾಜೇಂದ್ರ ಮೃಗಾಲಯ ಮತ್ತಷ್ಟು ಪ್ರವಾಸಿ ಸ್ನೇಹಿ

ಮೈಸೂರು : ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಅಧ್ಯಕ್ಷ ಶಿವಕುಮಾರ್.

ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಪ್ರವಾಸಿಗರನ್ನು ಮೃಗಾಲಯಕ್ಕೆ ಸೆಳೆಯುವ ಉದ್ದೇಶದಿಂದ ಆನ್ಲೈನ್ನಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಮೃಗಾಲಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮಾಹಿತಿ ಜಾಲಕ್ಕೆ ಒಳಪಡಿಸಲಾಗಿದೆ. ಮುಂಬರುವ ದಸರಾ ಮಹೋತ್ಸವವನ್ನು ಗುರಿಯಾಗಿಸಿಕೊಂಡು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯವನ್ನು ಮತ್ತಷ್ಟು ಪ್ರವಾಸಿ ಸ್ನೇಹಿಯಾಗಿಸಲು ಕ್ರಮಕೈಗೊಳ್ಳಲಾಗವುದು ಎಂದು ರಾಜ್ಯ ಮೃಗಾಲಯಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ತಿಳಿಸಿದರು. ಮೈಸೂರು ಸಂಸ್ಥಾನದ ಅರಸರು ಆರಂಭಿಸಿದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಪ್ರಸ್ತುತ ವಿಶ್ವದಲ್ಲಿಯೇ ಮಾನ್ಯತೆ ಗಳಿಸಿದೆ. ನಿತ್ಯವೂ ಸ್ಥಳೀಯರಿಗಿಂತ ಹೆಚ್ಚಾಗಿ ಅನ್ಯ ರಾಜ್ಯ ಸೇರಿದಂತೆ ಪ್ರಪಂಚದ ನಾನಾ ಮೂಲೆಗಳಿಂದ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಕಳೆದ ಎರಡು ವರ್ಷಗಳಲ್ಲಿ ಮೃಗಾಲಯದ ನಿರ್ವಹಣೆಗೆ ಕೊಂಚ ಹಿನ್ನಡೆಯಾದರೂ ಸಚಿವ ಎಸ್.ಟಿ. ಸೋಮಶೇಖರ್ ಅವರ ಸಹಕಾರ ಹಾಗೂ ದಾನಿಗಳ ನೆರವಿನಿಂದ ಹೆಚ್ಚಿನ ತೊಂದರೆಯಾಗಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ನಿತ್ಯವೂ ಮೃಗಾಲಯದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದೇನೆ. ಸ್ವಚ್ಛತೆ, ಪ್ರಾಣಿಗಳ ನಿರ್ವಹಣೆ, ಆಹಾರ ಪದಾರ್ಥಗಳ ಖರೀದಿ, ವಿತರಣೆ, ಪ್ರವಾಸಿ ಸ್ನೇಹಿ ವಾತಾವರಣ ಕಂಡುಬರುತ್ತಿದೆ. ಸದ್ಯ ದಸರಾ ಮಹೋತ್ಸವ ಸಮೀಪಿಸುತ್ತಿರುವುದರಿಂದ ಮೃಗಾಲಯಕ್ಕೆ ಭೇಟಿ ನೀಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.

andolana

Recent Posts

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

10 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

13 hours ago