ಮೈಸೂರು

ರಂಗಭೂಮಿ ಧರ್ಮಾತೀತ,ಜಾತ್ಯತೀತವಾದದ್ದು : ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣನೆ

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಆವರಣದ ಕೆಎಸ್‌ಜಿಎಚ್ ಸಭಾಂಗಣದಲ್ಲಿ ಸೋಮವಾರ ಸಂಗೀತ ವಿವಿ ಹಾಗೂ ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ‘ರಂಗಭೂಮಿ ಮತ್ತು ಪ್ರದರ್ಶಕ ಕಲೆಗಳು’ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಂಗಭೂಮಿ ಎಂಬುದು ಭಾಷೆ, ದೇಶ, ಹೀಗೆ ಎಲ್ಲಾ ಗಡಿಗಳನ್ನೂ ಮೀರಿದ್ದು. ಇಲ್ಲಿಗೆ ಬರುವವರು ರಾಮನಾಗುತ್ತಾರೆ, ಕೃಷ್ಣನಾಗುತ್ತಾರೆ. ಎಲ್ಲಾ ಮಹಾಪುರುಷರ ಆದರ್ಶಗಳನ್ನು ಅಭಿನಯದ ಮೂಲಕ ತೋರುತ್ತಾರೆ. ಈ ಮೂಲಕ ಅವರು ಆದರ್ಶ ವ್ಯಕ್ತಿಗಳಾಗಲು ಯತ್ನಿಸುತ್ತಾರೆ ಎಂದು ಹೇಳಿದರು.

ಭಾರತ ಎಂಬುದು ಬಹುತ್ವದ ದೇಶ. ಇಲ್ಲಿ ನೃತ್ಯ, ಸಂಗೀತ, ಆದಿವಾಸಿ, ಬುಡಕಟ್ಟುಗಳ ಕಲೆಗಳು ವಿಭಿನ್ನವಾಗಿವೆ. ನಮ್ಮ ರಾಜ್ಯದಲ್ಲಿ ಸಂಗೀತ ವಿವಿ, ಮಹಿಳಾ ವಿವಿ, ಕನ್ನಡ ವಿವಿ, ರಾಣಿ ಚನ್ನಮ್ಮ ವಿವಿ. ನಾಟಕ ಅಕಾಡೆಮಿ, ಹೀಗೆ ಎಲ್ಲವೂ ಇದೆ. ಇಷ್ಟು ವೈವಿಧ್ಯತೆ ದೇಶದ ಬೇರೆ ರಾಜ್ಯಗಳಲ್ಲಿ ಕಾಣ ಸಿಗುವುದಿಲ್ಲ ಎಂದರು.

ಜಗತ್ತು ಇಂದು ಬದಲಾಗುತ್ತಿದೆ. ತಂತ್ರಜ್ಞಾನ, ವಿಜ್ಞಾನ ಎಲ್ಲೆಡೆ ತನ್ನ ಛಾಪು ಮೂಡಿಸುತ್ತಿದೆ. ಎಐ ತಂತ್ರಜ್ಞಾನದ ಮೂಲಕ ಕಳೆದು ಹೋಗಿರುವ ನಾಗರಿಕತೆಯನ್ನೇ ಹುಟ್ಟುಹಾಕಬಹುದಾಗಿದೆ. ಇದರ ನಡುವೆ ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕೂಡ ನಮ್ಮ ಮೇಲಿದೆ ಎಂದರು.

ಮಧ್ಯಪ್ರದೇಶ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಹಾಗೂ ಹಿರಿಯ ಐಎಎಸ್ ಅಧಿಕಾರಿ ಎಸ್.ಧನರಾಜು ಮಾತನಾಡಿ, ಮನುಷ್ಯರಲ್ಲಿ ಮಾನ ವೀಯತೆಯನ್ನು ಬೆಳೆಸಲು ಕಲೆ, ಸಾಹಿತ್ಯ, ಸಂಗೀತ ಸಹಕಾರಿ ಎಂದು ತಿಳಿಸಿದರು.

ಸಂಗೀತ ವಿವಿ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುಎಸ್‌ಎನ ಟೆಕ್ಸಾಸ್ ವಿವಿಯ ವಸ್ತ್ರ ವಿನ್ಯಾಸಕಿ ಪ್ರೊ.ಸಾರಾ ಮೋಷರ್, ಪ್ರೊ.ಸಾರಾ ಕರನ್ ಐಸ್, ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ಅಧ್ಯಕ್ಷ ರಾಜೇಶ್ ಎಚ್. ತಲಕಾಡು, ಕುಲಸಚಿವ ಪ್ರೊ.ಎಂ.ಜಿ.ಮಂಜುನಾಥ್ ಮುಂತಾದವರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

6 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

9 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

10 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

12 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

13 hours ago