ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ.
ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ. ಬಳಿಕ ಚಾಕು ತೋರಿಸಿ ಎದರಿಸಿ ಮನೆಯಲ್ಲಿದ್ದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಜತೆಗೆ ನಗದು ಹಣವನ್ನು ದೋಚಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ದರೋಡೆ ವೇಳೆ ಕಳ್ಳರು ಬಳಸಿದ್ದ ಕಬ್ಬಿಣದ ರಾಡ್, ಎಲೆಕ್ಟ್ರಿಕ್ ಸಾಮಾಗ್ರಿ, ಸಲಾಕೆ, ಬ್ಯಾಗ್ ಸೇರಿದಂತೆ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಕಳ್ಳತನ ವೇಳೆ ಭಕ್ತಿ ಮೆರೆದ ಚಾಲಾಕಿ ಕಳ್ಳ: ಇನ್ನು ಕಳ್ಳತನಕ್ಕಾಗಿ ಮನೆಯೊಂದರ ಬಾಗಿಲು ಮುರಿಯುವ ಮುನ್ನಾ ಕಳ್ಳನೊಬ್ಬ ನಿಂಬೆ ಹಣ್ಣಿಟ್ಟು, ನಮಸ್ಕರಿಸಿ ನಂತರ ಬಾಗಿಲು ಮುರಿದಿದ್ದಾರೆ. ಈ ದೃಶ್ಯ ಸದ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…