ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ.
ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ. ಬಳಿಕ ಚಾಕು ತೋರಿಸಿ ಎದರಿಸಿ ಮನೆಯಲ್ಲಿದ್ದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಜತೆಗೆ ನಗದು ಹಣವನ್ನು ದೋಚಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ದರೋಡೆ ವೇಳೆ ಕಳ್ಳರು ಬಳಸಿದ್ದ ಕಬ್ಬಿಣದ ರಾಡ್, ಎಲೆಕ್ಟ್ರಿಕ್ ಸಾಮಾಗ್ರಿ, ಸಲಾಕೆ, ಬ್ಯಾಗ್ ಸೇರಿದಂತೆ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಕಳ್ಳತನ ವೇಳೆ ಭಕ್ತಿ ಮೆರೆದ ಚಾಲಾಕಿ ಕಳ್ಳ: ಇನ್ನು ಕಳ್ಳತನಕ್ಕಾಗಿ ಮನೆಯೊಂದರ ಬಾಗಿಲು ಮುರಿಯುವ ಮುನ್ನಾ ಕಳ್ಳನೊಬ್ಬ ನಿಂಬೆ ಹಣ್ಣಿಟ್ಟು, ನಮಸ್ಕರಿಸಿ ನಂತರ ಬಾಗಿಲು ಮುರಿದಿದ್ದಾರೆ. ಈ ದೃಶ್ಯ ಸದ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…
ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ…
ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ…
ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…