ಮೈಸೂರು

ಕಳ್ಳತನ ವೇಳೆ ಭಕ್ತಿ ಮೆರೆದ ಚಾಲಾಕಿ ಕಳ್ಳ: ದೋಚಿದ್ದು ಯಾರ ಮನೆಯಲ್ಲಿ ಗೊತ್ತಾ?

ಮೈಸೂರು: ಚಾಲಾಕಿ ಕಳ್ಳನೊಬ್ಬ ಸಿನಿಮಿಯಾ ರೀತಿಯಲ್ಲಿ ಪೊಲೀಸರ ಮನೆಯಲ್ಲಿಯೇ ಕಳ್ಳತನ ಮಾಡಿರುವ ಘಟನೆ ನಗರದ ಜೆಪಿ ನಗರ ಎರಡನೇ ಹಂತದಲ್ಲಿ ನಡೆದಿದೆ.

ತಡರಾತ್ರಿ ಮನೆ ಬೀಗ ಮುರಿದ ಕಳ್ಳರ ಗುಂಪೊಂದು ದರೋಡೆಗೆ ಮುಂದಾಗಿದ್ದಾರೆ. ಮನೆ ಮಾಲೀಕರು ಮನೆಗೆ ವಾಪಸಾದಾಗ ಕಳ್ಳರು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ. ಬಳಿಕ ಚಾಕು ತೋರಿಸಿ ಎದರಿಸಿ ಮನೆಯಲ್ಲಿದ್ದ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಜತೆಗೆ ನಗದು ಹಣವನ್ನು ದೋಚಿರುವುದು ಗೊತ್ತಾಗಿದೆ.

ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ದರೋಡೆ ವೇಳೆ ಕಳ್ಳರು ಬಳಸಿದ್ದ ಕಬ್ಬಿಣದ ರಾಡ್‌, ಎಲೆಕ್ಟ್ರಿಕ್‌ ಸಾಮಾಗ್ರಿ, ಸಲಾಕೆ, ಬ್ಯಾಗ್‌ ಸೇರಿದಂತೆ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ಕಳ್ಳತನ ವೇಳೆ ಭಕ್ತಿ ಮೆರೆದ ಚಾಲಾಕಿ ಕಳ್ಳ: ಇನ್ನು ಕಳ್ಳತನಕ್ಕಾಗಿ ಮನೆಯೊಂದರ ಬಾಗಿಲು ಮುರಿಯುವ ಮುನ್ನಾ ಕಳ್ಳನೊಬ್ಬ ನಿಂಬೆ ಹಣ್ಣಿಟ್ಟು, ನಮಸ್ಕರಿಸಿ ನಂತರ ಬಾಗಿಲು ಮುರಿದಿದ್ದಾರೆ. ಈ ದೃಶ್ಯ ಸದ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

4 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

1 hour ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

1 hour ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

1 hour ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

2 hours ago