ಮೈಸೂರು

ಮೈಸೂರು| ಎಟಿಎಂಗೆ ವರ್ಗಾಯಿಸಬೇಕಿದ್ದ ಹಣ ಕಳ್ಳತನ, ಪ್ರೇಯಸಿಗೆ ಚಿನ್ನ ಖರೀದಿ: ಆರೋಪಿ ಬಂಧಿಸಿದ ಬಿಳಿಕೆರೆ ಪೊಲೀಸರು

ಮೈಸೂರು: ಎಟಿಎಂಗೆ ವರ್ಗಾಯಿಸಬೇಕಿದ್ದ ಹಣವನ್ನು ಕಳ್ಳತನ ಮಾಡಿ ಆ ಹಣದಿಂದ ತನ್ನ ಪ್ರೇಯಸಿಗೆ ಚಿನ್ನ ಖರೀದಿ ಮಾಡಿದ್ದ ಆರೋಪಿಯನ್ನು ಬಿಳಿಕೆರೆ ಪೊಲೀಸ್‌ ಠಾಣಾ ಪೊಲೀಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ಹೌದು! ಈ ಘಟನೆಯೂ ಜಿಲ್ಲೆಯ ಹುಣಸೂರು ತಾಲ್ಲೂಕಿನ ಗದ್ದಿಗೆ ಗ್ರಾಮದಲ್ಲಿ ನಡೆದಿದ್ದು, ಇಲ್ಲಿನ ಎಟಿಎಂಗೆ 5.80 ಲಕ್ಷ ರೂಪಾಯಿಗಳನ್ನು ವರ್ಗಾಯಿಸಬೇಕಿತ್ತು. ಆದರೆ ಈ ಹಣವನ್ನು ಎಟಿಎಂಗೆ ವರ್ಗಾಯಿಸದೇ ತನ್ನ ಪ್ರಿಯತಮೆಗೆ ಬಂಗಾರದ ಉಡುಗೊರೆ ನೀಡಲು ಈ ಹಣವನ್ನೇ ಕದ್ದಿದ್ದಾನೆ.

ಈ ಘಟನೆಗೆ ಕಾರಣನಾದವನನ್ನು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತುರುಗನೂರಿನ ಅಕ್ಷಯ್‌ ಎಂಬಾತ ಎಂಬಾತ ಎಂದು ಗುರುತಿಸಲಾಗಿದೆ. ಈತ ಮೈಸೂರಿನ ಟಿ.ಎಲ್‌.ಎಂಟರ್‌ ಪ್ರೈಸಸ್‌ನಲ್ಲಿ ಕೆಲಸ ಮಾಡುತ್ತಿದ್ದು, 16 ಎಟಿಎಂಗಳಿಗೆ ಹಣ ತುಂಬುವ ಕೆಲಸವನ್ನು ಕಂಪೆನಿಯೂ ಅಕ್ಷಯ್‌ಗೆ ನೀಡಿತ್ತು. ಆದರೆ ಈತ ಕಂಪೆನಿಯಿಂದ ಹಣ ಪಡೆದು ಗದ್ದಿಗೆಯ ಎಟಿಎಂಗೆ ಹಣ ತುಂಬುವಂತೆ ನಾಟಕವಾಡಿ 5.80 ಲಕ್ಷ ರೂ ತನ್ನ ಬ್ಯಾಗಿಗಿಳಿಸಿಕೊಂಡು ಎಸ್ಕೇಪ್ ಆಗಿದ್ದ. ಬಳಿಕ ತನ್ನ ಪ್ರೇಯಸಿ ತೇಜಸ್ವಿನಿಗೆ ಚಿನ್ನ ಕೊಡಿಸಿದ್ದನು. ಈ ವಿಚಾರದ ತಿಳಿದ ಕೂಡಲೇ ಬಿಳಿಕೆರೆ ಪೊಲೀಸರು ಆರೋಪಿಗಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.

ಇನ್ನೂ ಆರೋಪಿ ಅಕ್ಷಯ್‌ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ತಕ್ಷಣ ಆತನನ್ನು ಬಿಳಿಕೆರೆ ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

7 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

8 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

8 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

9 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

9 hours ago