ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ ಬಿದ್ದು ಸರ್ಕಾರವೇ ಪಾಸ್ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು.
ಇಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಿಸಲಾಗಿದೆ. ರಾಜ್ಯದ ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಹೀಗಿದ್ದರೂ ಶೇ.94ರಷ್ಟು ಫಲತಾಂಶ ಬಂದಿದೆ. ಇದು ಹೇಗೆ ಸಾಧ್ಯ? ಇದು ಯಾವ ರೀತಿಯ ಸಾಧನೆ? ಹಟಕ್ಕೆ ಬಿದ್ದು ಇವರೆ ಪಾಸ್ ಮಾಡಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಬೊಧನೆ, ಶಿಕ್ಷಕರ ನೇಮಕಾತಿ, ಶಾಲೆಗಳಿಗೆ ಸೌಲಭ್ಯ ಒದಗಿಸುವುದರಲ್ಲಿ ಹಟ ಇರಬೇಕಿತ್ತು ಎಂದಿದ್ದಾರೆ.
ರಾಜ್ಯದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿಹೋಗಿದೆ. 20ಕ್ಕೆ 20 ಆಂತರಿಕ ಅಂಕಗಳನ್ನು ಎಲ್ಲರಿಗೂ ಕೊಡಲಾಗಿದೆ. ಪಾಸಾಗಲು ಇನ್ನು ಬೇಕಾದದು 13 ಅಂಕ ಮಾತ್ರ. ಅದನ್ನು ನಕಲು ಮಾಡಿಸಿದ್ದಾರೆ. ಇದು ಬಹಳ ನೋವಿನ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.
ಗುಣಮಟ್ಟದ ಶಿಕ್ಷಣ ನೀಡದೆ ಎಲ್ಲರನ್ನೂ ಪಾಸ್ ಮಾಡಲು ಕಸರತ್ತು ನಡೆಸಿದ್ದಾರೆ. ಆದರೆ, ಮುಂದಿನ ಹಂತ ಪಿಯು ಶಿಕ್ಷಣ ಮುಂದುವರಿಸುವವರ ಪ್ರಮಾಣ ಕಡಿಮೆ ಆಗಲಿದೆ. ಇದು ಆಘಾತಕಾರಿಯಾದುದು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಿಂದಿ ವಿಷಯದಲ್ಲಿ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಆದರೂ ಸರ್ಕಾರ ಶಿಕ್ಷಣ ವಿರೋಧಿ ಕೆಲಸವನ್ನೇ ಮುಂದುವರೆಸುತ್ತಿದೆ. ಇದೆಲ್ಲವನ್ನೂ ನೋಡಿದರೆ ಶಿಕ್ಷಣ ಸಚಿವನಾಗಿದ್ದ ನನಗೆ ನೋವಾಗುತ್ತಿದೆ ಎಂದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…