ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. ಒಳಗಡೆ ಏನೂ ಆಗಲ್ಲ. ಇದು ಬರೀ ಮಾಧ್ಯಮಗಳಲ್ಲಿ ಪ್ರಚಾರ ಆಗುತ್ತಿದೆ. ಇದನ್ನು ನೋಡಿಕೊಂಡು ಕೆಲವರು ಹೇಳುತ್ತಾರೆ. ನಮ್ಮ ಪಕ್ಷದಲ್ಲಿ ಈ ವಿಷಯಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಸಿಎಂ ರೇಸ್ನಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಿಎಂ ರೇಸ್ನಿಂದ ಹಿಂದೆ ಸರಿದಿದ್ದೇನೆ. ಹಿಂದೆ ಸರಿದು ಒಂದು ವರ್ಷವೇ ಆಗೋಗಿದೆ ಎಂದು ನಗುತ್ತಾ ಉತ್ತರ ನೀಡಿ ಜಾರಿಕೊಂಡರು.
ಇನ್ನು ದಲಿತ ಸಿಎಂ ಕೂಗು ಕೇಳಿ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಡಿನ್ನರ್ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ. ಸಿಎಂ ಡಿನ್ನರ್ಗೆ ಕರೆದಿದ್ದರು ನಾವು ಹೋಗಿದ್ದೆವು ಅಷ್ಟೇ ಎಂದು ಡಿನ್ನರ್ ಸಭೆಯ ಗುಟ್ಟು ಬಿಟ್ಟು ಕೊಡದೇ ಹೊರಟರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…