ಮೈಸೂರು

ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ. ಒಳಗಡೆ ಏನೂ ಆಗಲ್ಲ. ಇದು ಬರೀ ಮಾಧ್ಯಮಗಳಲ್ಲಿ ಪ್ರಚಾರ ಆಗುತ್ತಿದೆ. ಇದನ್ನು ನೋಡಿಕೊಂಡು ಕೆಲವರು ಹೇಳುತ್ತಾರೆ. ನಮ್ಮ ಪಕ್ಷದಲ್ಲಿ ಈ ವಿಷಯಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಿಎಂ ರೇಸ್‌ನಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಿಎಂ ರೇಸ್‌ನಿಂದ ಹಿಂದೆ ಸರಿದಿದ್ದೇನೆ. ಹಿಂದೆ ಸರಿದು ಒಂದು ವರ್ಷವೇ ಆಗೋಗಿದೆ ಎಂದು ನಗುತ್ತಾ ಉತ್ತರ ನೀಡಿ ಜಾರಿಕೊಂಡರು.

ಇನ್ನು ದಲಿತ ಸಿಎಂ ಕೂಗು ಕೇಳಿ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಡಿನ್ನರ್‌ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ. ಸಿಎಂ ಡಿನ್ನರ್‌ಗೆ ಕರೆದಿದ್ದರು ನಾವು ಹೋಗಿದ್ದೆವು ಅಷ್ಟೇ ಎಂದು ಡಿನ್ನರ್‌ ಸಭೆಯ ಗುಟ್ಟು ಬಿಟ್ಟು ಕೊಡದೇ ಹೊರಟರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

2 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

3 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

10 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago