ಮೈಸೂರು : ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಗರದ ಜಯಲಕ್ಷ್ಮಿಪುರಂನ ತಮ್ಮ ನೀವಾಸ ಭೀಮಸಧನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಉತ್ತಮ ವಾತಾವರಣ ಇದೆ ಎಂದು ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕಿಳಿದಿದ್ದು, ಕಾಂಗ್ರಸ್ ಪಕ್ಷದ ಗೆಲುವಿನ ಎಲ್ಲಾ ವಾತಾವರಣ ಇದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಅವರನ್ನು ಹೊಗಳಿ ಮಾತನಾಡಲು ಸಾಧ್ಯವೇ? ವಿರೋಧ ಪಕ್ಷದಲ್ಲಿದ್ದಾಗ ಹಾಗೇ ಮಾತನಾಡಬೇಕಾಗುತ್ತದೆ. ಅವರೂ ಮತನಾಡಬೇಕು, ನಾವು ಮಾತನಾಡಬೇಕು ಎಂದರು.
ರಾಜಕೀಯದಲ್ಲಿ ಇದೆಲ್ಲಾ ಸಹಜ. ಆದರೆ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ದ್ವೇಷ ಇಲ್ಲ. ರಾಜಕೀಯ ಜೀವನ ಮುಗಿದಿದೆ. ಇನ್ನು ಮುಂದೆ ಸಿದ್ದರಾಮಯ್ಯ ಪರ ಅಥವ ವಿರೋಧವಾಗಿ ಮಾತನಾಡುವ ವಿಚಾರವೇ ಬರುವುದಿಲ್ಲ ಎಂದರು.
ಬೆಂಬಲ ನೀಡಲು ಸಿಎಂ ಮನವಿ : ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ನಾನು ಈಗಾಗಲೇ ಚುನಾವಣಾ ನಿವೃತ್ತಿ ಗೋಷಣೆ ಮಾಡಿದ್ದೇನೆ ಎಂದು ಅವರಿಗೆ ತಿಳಿಸಿದ್ದೇನೆ ಎಂದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…