ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು.
ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಗಾವಡಗೆರೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಎಂಟನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಇನ್ನೂ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಕೊರತೆ ಇದ್ದು, ಅದನ್ನು ವಿದ್ಯಾರ್ಥಿಗಳು ಅವರಿಗೆ ಮುಟ್ಟಿಸುವ ಅನಿವಾರ್ಯ ಇದೆ ಎಂದು ತಿಳಿಸಿದ ಅವರು ಶಿಬಿರದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಸಮವಸ್ತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಮೂಕನಹಳ್ಳಿ ಗ್ರಾಮ ಪಂಚಾಯಿತಿಅಧ್ಯಕ್ಷೆ ನಾಗಮ್ಮ, ಶಿಬಿರದ ಕಾರ್ಯಕ್ರಮ ಅಧಿಕಾರಿ ಮರಿಸ್ವಾಮಿ, ಸಹಸಂಯೋಜಕರಾದ ಮಂಜು, ಮಹಿಳಾ ಸಹಸಂಯೋಜಕರಾದ ವಿದ್ಯಾಶ್ರೀ, ಗಾವಡಗೆರೆ ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ್, ಪಂಚಾಯಿತಿ ಸದಸ್ಯರುಗಳಾದ ರಾಮೇಗೌಡ, ನೀಲಮ್ಮ, ಮಹದೇವ, ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ್, ಸದಸ್ಯರಾದ ಗಣಪತಿ ಇಂದೋಲ್ಕರ್, ಮಹೇಶ್, ಶ್ರೀನಿವಾಸ್, ಕುಮಾರ್, ಚಂದ್ರೇಗೌಡ, ಪ್ರಕಾಶ್, ಪಿಡಿಒ ಶ್ರೀನಿವಾಸ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು ಹಾಗೂ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಶಿಬಿರದ ವಿದ್ಯಾರ್ಥಿಗಳು ಹಾಜರಿದ್ದರು.
ವಾಷಿಂಗ್ಟನ್ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…