ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು.
ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಗಾವಡಗೆರೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಎಂಟನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಇನ್ನೂ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಕೊರತೆ ಇದ್ದು, ಅದನ್ನು ವಿದ್ಯಾರ್ಥಿಗಳು ಅವರಿಗೆ ಮುಟ್ಟಿಸುವ ಅನಿವಾರ್ಯ ಇದೆ ಎಂದು ತಿಳಿಸಿದ ಅವರು ಶಿಬಿರದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಸಮವಸ್ತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಮೂಕನಹಳ್ಳಿ ಗ್ರಾಮ ಪಂಚಾಯಿತಿಅಧ್ಯಕ್ಷೆ ನಾಗಮ್ಮ, ಶಿಬಿರದ ಕಾರ್ಯಕ್ರಮ ಅಧಿಕಾರಿ ಮರಿಸ್ವಾಮಿ, ಸಹಸಂಯೋಜಕರಾದ ಮಂಜು, ಮಹಿಳಾ ಸಹಸಂಯೋಜಕರಾದ ವಿದ್ಯಾಶ್ರೀ, ಗಾವಡಗೆರೆ ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ್, ಪಂಚಾಯಿತಿ ಸದಸ್ಯರುಗಳಾದ ರಾಮೇಗೌಡ, ನೀಲಮ್ಮ, ಮಹದೇವ, ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ್, ಸದಸ್ಯರಾದ ಗಣಪತಿ ಇಂದೋಲ್ಕರ್, ಮಹೇಶ್, ಶ್ರೀನಿವಾಸ್, ಕುಮಾರ್, ಚಂದ್ರೇಗೌಡ, ಪ್ರಕಾಶ್, ಪಿಡಿಒ ಶ್ರೀನಿವಾಸ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು ಹಾಗೂ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಶಿಬಿರದ ವಿದ್ಯಾರ್ಥಿಗಳು ಹಾಜರಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…