ಮೈಸೂರು

ನಾಯಕತ್ವ ಬೆಳೆಸಿಕೊಳ್ಳಲು ಎನ್‌ ಎಸ್‌ ಎಸ್‌  ಅವಶ್ಯಕತೆ ಇದೆ : ಶಾಸಕ ಮಂಜುನಾಥ್‌

ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು.

ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಗಾವಡಗೆರೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಎಂಟನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಇನ್ನೂ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಕೊರತೆ ಇದ್ದು, ಅದನ್ನು ವಿದ್ಯಾರ್ಥಿಗಳು ಅವರಿಗೆ ಮುಟ್ಟಿಸುವ ಅನಿವಾರ್ಯ ಇದೆ ಎಂದು ತಿಳಿಸಿದ ಅವರು ಶಿಬಿರದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಸಮವಸ್ತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮೂಕನಹಳ್ಳಿ ಗ್ರಾಮ ಪಂಚಾಯಿತಿಅಧ್ಯಕ್ಷೆ ನಾಗಮ್ಮ, ಶಿಬಿರದ ಕಾರ್ಯಕ್ರಮ ಅಧಿಕಾರಿ ಮರಿಸ್ವಾಮಿ, ಸಹಸಂಯೋಜಕರಾದ ಮಂಜು, ಮಹಿಳಾ ಸಹಸಂಯೋಜಕರಾದ ವಿದ್ಯಾಶ್ರೀ, ಗಾವಡಗೆರೆ ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ್, ಪಂಚಾಯಿತಿ ಸದಸ್ಯರುಗಳಾದ ರಾಮೇಗೌಡ, ನೀಲಮ್ಮ, ಮಹದೇವ, ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ್, ಸದಸ್ಯರಾದ ಗಣಪತಿ ಇಂದೋಲ್ಕರ್, ಮಹೇಶ್, ಶ್ರೀನಿವಾಸ್, ಕುಮಾರ್, ಚಂದ್ರೇಗೌಡ, ಪ್ರಕಾಶ್, ಪಿಡಿಒ ಶ್ರೀನಿವಾಸ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು ಹಾಗೂ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಶಿಬಿರದ ವಿದ್ಯಾರ್ಥಿಗಳು ಹಾಜರಿದ್ದರು.

andolana

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

13 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

16 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

16 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

17 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

18 hours ago