ಮೈಸೂರು

ಬೆಂಗಳೂರು-ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಮಾಡುವ ಚಿಂತನೆ ಇದೆ : ಸಚಿವ ಭೈರತಿ ಸುರೇಶ್‌

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಲ್ಲವನ್ನು ಸೇರಿಸಿ ಎರಡು ಸಾವಿರ ಕೋಟಿ ರೂ. ಯೋಜನೆ ರೂಪಿಸುತ್ತಿದ್ದೇವೆ. ಇದು ಸಣ್ಣ ಮೊತ್ತ ಅಲ್ಲ ಅಧಿಕಾರಿಗಳೊಂದಿಗೆ ಚರ್ಚಿಸಿ ಡಿಪಿಆರ್ ಸಿದ್ದಪಡಿಸುತ್ತೇವೆ. ಎರಡನೇಯ ದರ್ಜೆಯ ನಗರಗಳು ಬೆಳೆಯಬೇಕು. ಅದರಲ್ಲೂ ಮೈಸೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರ ಇಲ್ಲಿನ ರಿಂಗ್ ರಸ್ತೆಗೆ ನಾಲ್ಕೈದು ಕಡೆ ಫ್ಲೈ ಓವರ್ ಆಗಬೇಕಿದೆ ಎಂದರು.

ಬೆಳಗಾವಿಯಲ್ಲಿ ಗುತ್ತಿಗೆದಾರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರಾ? ಗುತ್ತಿಗೆ ವಿಚಾರಕ್ಕೂ ನನಗೂ ಏನು ಸಂಬಂಧ? ಅವೆಲ್ಲವೂ ಇ-ಪ್ರಕ್ಯೂರ್‌ಮೆಂಟ್ ಮೂಲಕ ನಡೆಯುವ ಪ್ರಕ್ರಿಯೆ. ಅದರಲ್ಲಿ ನಮ್ಮವರನ್ನು ಹೇಗೆ ಸೇರಿಸಲು ಸಾಧ್ಯ ಎಂದರು. ಸುಖಾಸುಮ್ಮನೆ ಇಂತಹ ಆರೋಪಗಳು ಅಧಿಕಾರದಲ್ಲಿದ್ದಾಗ ಕೇಳಿ ಬರುತ್ತದೆ. ಯಾರು ಟೆಂಡರ್‌ನಲ್ಲಿ ಭಾಗವಹಿಸುತ್ತಾರೆ ಅಂತಹವರಿಗೆ ಟೆಂಡರ್ ಸಿಗುತ್ತೆ. ಬೆಳಗಾವಿ ಗುತ್ತಿಗೆದಾರರ ಪ್ರತಿಭಟನೆ ವಿಚಾರ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಸಿಎಂ ಮತ್ತು ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವ ದೊಡ್ಡ ವ್ಯಕ್ತಿ ನಾನಲ್ಲ. ಆದರೂ ಕೆಲವು ಸತ್ಯ ಹೇಳುತ್ತೇನೆ ಕೇಳಿ. ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹರೇ ಬಿಜೆಪಿಯವರು‌. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದು ಬಿಜೆಪಿ. ಅವರು ಭ್ರಷ್ಟಾಚಾರ ಮಾಡಿ ಈಗ ಅದನ್ನು ನಮ್ಮ ಮೇಲೆ ಹೇಳುತ್ತಾರೆ. ಇಡೀ ರಾಜ್ಯದ ಜನರೇ ಹೇಳುತ್ತಿದ್ದಾರೆ ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ರಾಜಕಾರಣ ಬಿಟ್ಟು ಬೇರೆ ಬೇಕಾದರೆ ಉತ್ತರಿಸುತ್ತೇನೆ ಎಂದು ತಿಳಿಸಿದರು.

ಶೀಘ್ರದಲ್ಲೇ ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ. ಚುನಾವಣೆ ಮುಂದೂಡುವ ಪ್ರಶ್ನೆ ಸರ್ಕಾರದ ಮುಂದೆ ಇಲ್ಲ. ಮುಖ್ಯಮಂತ್ರಿ ಮತ್ತು ನಾನು ಚುನಾವಣೆ ನಡೆಸಲು ಉತ್ಸೂಕರಾಗಿದ್ದೇವೆ. ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಸಭಾ ಚುನಾವಣೆ ಇರುವುದು ಏಪ್ರಿಲ್‌ನಲ್ಲಿ. ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು. ನಾವು ಚುನಾವಣೆ ಮಾಡೇ ಮಾಡುತ್ತೇವೆ ಎಂದರು.

lokesh

Recent Posts

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

37 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

5 hours ago