ಮೈಸೂರು

ಬೆಂಗಳೂರು-ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಮಾಡುವ ಚಿಂತನೆ ಇದೆ : ಸಚಿವ ಭೈರತಿ ಸುರೇಶ್‌

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಲ್ಲವನ್ನು ಸೇರಿಸಿ ಎರಡು ಸಾವಿರ ಕೋಟಿ ರೂ. ಯೋಜನೆ ರೂಪಿಸುತ್ತಿದ್ದೇವೆ. ಇದು ಸಣ್ಣ ಮೊತ್ತ ಅಲ್ಲ ಅಧಿಕಾರಿಗಳೊಂದಿಗೆ ಚರ್ಚಿಸಿ ಡಿಪಿಆರ್ ಸಿದ್ದಪಡಿಸುತ್ತೇವೆ. ಎರಡನೇಯ ದರ್ಜೆಯ ನಗರಗಳು ಬೆಳೆಯಬೇಕು. ಅದರಲ್ಲೂ ಮೈಸೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರ ಇಲ್ಲಿನ ರಿಂಗ್ ರಸ್ತೆಗೆ ನಾಲ್ಕೈದು ಕಡೆ ಫ್ಲೈ ಓವರ್ ಆಗಬೇಕಿದೆ ಎಂದರು.

ಬೆಳಗಾವಿಯಲ್ಲಿ ಗುತ್ತಿಗೆದಾರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರಾ? ಗುತ್ತಿಗೆ ವಿಚಾರಕ್ಕೂ ನನಗೂ ಏನು ಸಂಬಂಧ? ಅವೆಲ್ಲವೂ ಇ-ಪ್ರಕ್ಯೂರ್‌ಮೆಂಟ್ ಮೂಲಕ ನಡೆಯುವ ಪ್ರಕ್ರಿಯೆ. ಅದರಲ್ಲಿ ನಮ್ಮವರನ್ನು ಹೇಗೆ ಸೇರಿಸಲು ಸಾಧ್ಯ ಎಂದರು. ಸುಖಾಸುಮ್ಮನೆ ಇಂತಹ ಆರೋಪಗಳು ಅಧಿಕಾರದಲ್ಲಿದ್ದಾಗ ಕೇಳಿ ಬರುತ್ತದೆ. ಯಾರು ಟೆಂಡರ್‌ನಲ್ಲಿ ಭಾಗವಹಿಸುತ್ತಾರೆ ಅಂತಹವರಿಗೆ ಟೆಂಡರ್ ಸಿಗುತ್ತೆ. ಬೆಳಗಾವಿ ಗುತ್ತಿಗೆದಾರರ ಪ್ರತಿಭಟನೆ ವಿಚಾರ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

ಸಿಎಂ ಮತ್ತು ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವ ದೊಡ್ಡ ವ್ಯಕ್ತಿ ನಾನಲ್ಲ. ಆದರೂ ಕೆಲವು ಸತ್ಯ ಹೇಳುತ್ತೇನೆ ಕೇಳಿ. ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹರೇ ಬಿಜೆಪಿಯವರು‌. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದು ಬಿಜೆಪಿ. ಅವರು ಭ್ರಷ್ಟಾಚಾರ ಮಾಡಿ ಈಗ ಅದನ್ನು ನಮ್ಮ ಮೇಲೆ ಹೇಳುತ್ತಾರೆ. ಇಡೀ ರಾಜ್ಯದ ಜನರೇ ಹೇಳುತ್ತಿದ್ದಾರೆ ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ರಾಜಕಾರಣ ಬಿಟ್ಟು ಬೇರೆ ಬೇಕಾದರೆ ಉತ್ತರಿಸುತ್ತೇನೆ ಎಂದು ತಿಳಿಸಿದರು.

ಶೀಘ್ರದಲ್ಲೇ ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ. ಚುನಾವಣೆ ಮುಂದೂಡುವ ಪ್ರಶ್ನೆ ಸರ್ಕಾರದ ಮುಂದೆ ಇಲ್ಲ. ಮುಖ್ಯಮಂತ್ರಿ ಮತ್ತು ನಾನು ಚುನಾವಣೆ ನಡೆಸಲು ಉತ್ಸೂಕರಾಗಿದ್ದೇವೆ. ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಸಭಾ ಚುನಾವಣೆ ಇರುವುದು ಏಪ್ರಿಲ್‌ನಲ್ಲಿ. ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು. ನಾವು ಚುನಾವಣೆ ಮಾಡೇ ಮಾಡುತ್ತೇವೆ ಎಂದರು.

lokesh

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

9 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

9 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

12 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

12 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

12 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

13 hours ago