ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಲ್ಲವನ್ನು ಸೇರಿಸಿ ಎರಡು ಸಾವಿರ ಕೋಟಿ ರೂ. ಯೋಜನೆ ರೂಪಿಸುತ್ತಿದ್ದೇವೆ. ಇದು ಸಣ್ಣ ಮೊತ್ತ ಅಲ್ಲ ಅಧಿಕಾರಿಗಳೊಂದಿಗೆ ಚರ್ಚಿಸಿ ಡಿಪಿಆರ್ ಸಿದ್ದಪಡಿಸುತ್ತೇವೆ. ಎರಡನೇಯ ದರ್ಜೆಯ ನಗರಗಳು ಬೆಳೆಯಬೇಕು. ಅದರಲ್ಲೂ ಮೈಸೂರು ಶರವೇಗದಲ್ಲಿ ಬೆಳೆಯುತ್ತಿರುವ ನಗರ ಇಲ್ಲಿನ ರಿಂಗ್ ರಸ್ತೆಗೆ ನಾಲ್ಕೈದು ಕಡೆ ಫ್ಲೈ ಓವರ್ ಆಗಬೇಕಿದೆ ಎಂದರು.
ಬೆಳಗಾವಿಯಲ್ಲಿ ಗುತ್ತಿಗೆದಾರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗುತ್ತಿಗೆದಾರರು ನೇರವಾಗಿ ನನ್ನ ಹೆಸರು ಹೇಳಿದ್ದಾರಾ? ಗುತ್ತಿಗೆ ವಿಚಾರಕ್ಕೂ ನನಗೂ ಏನು ಸಂಬಂಧ? ಅವೆಲ್ಲವೂ ಇ-ಪ್ರಕ್ಯೂರ್ಮೆಂಟ್ ಮೂಲಕ ನಡೆಯುವ ಪ್ರಕ್ರಿಯೆ. ಅದರಲ್ಲಿ ನಮ್ಮವರನ್ನು ಹೇಗೆ ಸೇರಿಸಲು ಸಾಧ್ಯ ಎಂದರು. ಸುಖಾಸುಮ್ಮನೆ ಇಂತಹ ಆರೋಪಗಳು ಅಧಿಕಾರದಲ್ಲಿದ್ದಾಗ ಕೇಳಿ ಬರುತ್ತದೆ. ಯಾರು ಟೆಂಡರ್ನಲ್ಲಿ ಭಾಗವಹಿಸುತ್ತಾರೆ ಅಂತಹವರಿಗೆ ಟೆಂಡರ್ ಸಿಗುತ್ತೆ. ಬೆಳಗಾವಿ ಗುತ್ತಿಗೆದಾರರ ಪ್ರತಿಭಟನೆ ವಿಚಾರ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಸಿಎಂ ಮತ್ತು ಡಿಸಿಎಂ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಹೇಳಿಕೆಗೆ ಉತ್ತರ ಕೊಡುವ ದೊಡ್ಡ ವ್ಯಕ್ತಿ ನಾನಲ್ಲ. ಆದರೂ ಕೆಲವು ಸತ್ಯ ಹೇಳುತ್ತೇನೆ ಕೇಳಿ. ದೇಶದಲ್ಲಿ ಭ್ರಷ್ಟಾಚಾರದ ಪಿತಾಮಹರೇ ಬಿಜೆಪಿಯವರು. ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ್ದು ಬಿಜೆಪಿ. ಅವರು ಭ್ರಷ್ಟಾಚಾರ ಮಾಡಿ ಈಗ ಅದನ್ನು ನಮ್ಮ ಮೇಲೆ ಹೇಳುತ್ತಾರೆ. ಇಡೀ ರಾಜ್ಯದ ಜನರೇ ಹೇಳುತ್ತಿದ್ದಾರೆ ನಮ್ಮ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ರಾಜಕಾರಣ ಬಿಟ್ಟು ಬೇರೆ ಬೇಕಾದರೆ ಉತ್ತರಿಸುತ್ತೇನೆ ಎಂದು ತಿಳಿಸಿದರು.
ಶೀಘ್ರದಲ್ಲೇ ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಮಾಡುತ್ತೇವೆ. ಚುನಾವಣೆ ಮುಂದೂಡುವ ಪ್ರಶ್ನೆ ಸರ್ಕಾರದ ಮುಂದೆ ಇಲ್ಲ. ಮುಖ್ಯಮಂತ್ರಿ ಮತ್ತು ನಾನು ಚುನಾವಣೆ ನಡೆಸಲು ಉತ್ಸೂಕರಾಗಿದ್ದೇವೆ. ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧ ಇಲ್ಲ. ಲೋಕಸಭಾ ಚುನಾವಣೆ ಇರುವುದು ಏಪ್ರಿಲ್ನಲ್ಲಿ. ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು. ನಾವು ಚುನಾವಣೆ ಮಾಡೇ ಮಾಡುತ್ತೇವೆ ಎಂದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…