ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ . ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಮಾಧ್ಯಮದಲ್ಲಿ ಮಾತ್ರ ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಇಳಿಸಿ ಅಂತ ಯಾರು ಕೇಳುತ್ತಿಲ್ಲ ಎಂದರು.
ಮನರೇಗಾ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಜಟಾಪಟಿ ವಿಚಾರವಾಗಿ ಮಾತನಾಡಿ ನಾವು ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಲ್ಲಿ ಸಾಗುತ್ತಿದ್ದೇವೆ. ಬಿಜೆಪಿ ಅವರಿಗೆ ಜನರ ಕೆಲಸ ಬೇಕಿಲ್ಲ. ಗಾಂಧೀಜಿಯ ಆಶಯಗಳು ಬೇಕಿಲ್ಲ. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದಾರೆ ಸಾವಿರಾರು ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದಾರೆ. ಅವರು ನಮ್ಮ ಮೇಲೆ ಮಾಡುವ ಆರೋಪ ಎಲ್ಲ ಸುಳ್ಳು ಎಂದರು.
ಕೆ.ಜೆ ಜಾರ್ಜ್ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಮೂಗು ತೂರಿಸಿದ್ದಾರೆ ಎಂಬ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಈ ವಿಚಾರದ ಬಗ್ಗೆ ನಿಜಕ್ಕೂ ನನಗೆ ಗೊತ್ತಿಲ್ಲ. ಖುದ್ದು ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಸುಖಾ ಸುಮ್ಮನೆ ನನ್ನ ಹೆಸರನ್ನು ಬಿಜೆಪಿ ಎಳೆದು ತರುವ ಕೆಲಸ ಮಾಡಿದೆ ಇದು ಹೊಸದೇನಲ್ಲ. ಅವರ ಆರೋಪದಲ್ಲಿ ಯಾವುದೇ ಉರುಳಿಲ್ಲ. ಸದನದಲ್ಲೂ ಕೂಡ ಬಿಜೆಪಿ ನನ್ನ ಹೆಸರು ಹೇಳಿದೆ. ಈ ಹಿಂದಿನಿಂದಲೂ ನನ್ನ ಟಾರ್ಗೆಟ್ ಮಾಡಿಕೊಂಡು ಬಂದಿದ್ದಾರೆ. ಅವರ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಕೂಡ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ಮಾಡೋದನ್ನು ಸ್ವಾಗತಿಸುತ್ತೇನೆ. ದೊಡ್ಡ ದೊಡ್ಡ ರಾಷ್ಟ್ರಗಳಲ್ಲಿ ಇವಿಎಂ ಮಿಷನ್ ರದ್ದು ಮಾಡಿ ಬ್ಯಾಲೆಟ್ ಪೇಪರ್ ಬಳಸುತ್ತಿದ್ದಾರೆ. ತಂತ್ರಜ್ಞಾನದಲ್ಲಿ ಮುಂದುವರೆದ ರಾಷ್ಟ್ರಗಳೇ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆಗೆ ಮುಂದಾಗಿದೆ. ನನ್ನ ಅಭಿಪ್ರಾಯವು ಅದೇ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸುವುದು ಸೂಕ್ತ. ಇದು ನನ್ನ ಅಭಿಪ್ರಾಯ ಎಂದರು.
ಮುಡಾ ಹಗರಣ ಕೋರ್ಟ್ ಬಿ ರಿಪೋರ್ಟ್ ಪುರಸ್ಕಾರ ವಿಚಾರ, ನಮಗೆ ಕಾನೂನಿನಲ್ಲಿ ನಂಬಿಕೆ ಇತ್ತು. ನಾವೇನೂ ತಪ್ಪು ಮಾಡಿರಲಿಲ್ಲ. ಕೋರ್ಟ್ ತೀರ್ಪು ಸ್ವಾಗತ ಮಾಡುತ್ತೇವೆ. ನಮ್ಮ ತಾಯಿ ಕೂಡ ಸಂತೋಷ ವ್ಯಕ್ತಪಡಿಸಿದ್ದಾರೆ. ಸ್ನೇಹಮಯಿ ಕೃಷ್ಣ ಹೋರಾಟ ಮಾಡಲಿ. ಕಾನೂನು ಎಲ್ಲರಿಗೂ ಒಂದೆ ಎಂದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…