ಮೈಸೂರು

ಸೂರಜ್‌ ರೇವಣ್ಣ ಬಂಧನ ವಿಚಾರದಲ್ಲಿ ಯಾವುದೇ ಷಡ್ಯಂತರವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಯಾವುದೆ ಷಡ್ಯಂತರ ನಡೆಸಿಲ್ಲ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು, ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೂರಜ್‌ ವಿರುದ್ಧ ಯುವಕನೊಬ್ಬ ದೂರು ನೀಡಿದ್ದಾರೆ. ತಪ್ಪು ಯಾರೇ ಮಾಡಿದ್ದರು ಶಿಕ್ಷೆಯಾಗುತ್ತದೆ. ಈ ವಿಚಾರದಲ್ಲಿ ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದಾರೆ ಮುಂದಿನ ದಿನಗಳಲ್ಲಿ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಸಂಬಂಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವುದೇ ನೈತಿಕತೆ ಇಲ್ಲ. ದೇಶದಲ್ಲಿ ತೈಲ ಬೆಲೆ ಏರಿಕೆಯಾಗಲು ಬಿಜೆಪಿ ಕಾರಣ. ಚುನಾವಣಾ ಸಮಯದಲ್ಲಿ ಬೆಲೆ ಇಳಿಕೆ ಮಾಡಿದರು. ಇದನ್ನು ಈಗ ಏರಿಕೆ ಮಾಡಲಾಗಿದೆ ಎಂದು ಕಿಡಿಕಾರಿದರು.

ಇನ್ನು ಚನ್ನಪಟ್ಟಣ ಉಪ ಚುನಾವಣಾ ಕಣದ ಬಗ್ಗೆ ಮಾತನಾಡಿ, ಉಪ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು ಮತ್ತು ಸ್ಥಳೀಯ ಮುಖಂಡರು ಸೇರಿ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ. ಆ ಕ್ಷೇತ್ರದ ಹೈಗ್ರೌಂಡ್‌ ರಿಯಾಲಿಟಿ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

46 mins ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

2 hours ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

3 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

5 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

5 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

6 hours ago