ಮೈಸೂರು

ಶಾಲಾ ಪಠ್ಯಪುಸ್ತಕದಲ್ಲಿ ಯಾವುದೇ ಮುಖ್ಯ ಬದಲಾವಣೆಯಿಲ್ಲ: ಮಧು ಬಂಗಾರಪ್ಪ

ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ನಗರದ ಕಾಂಗ್ರೆಸ್‌ ಭವದಲ್ಲಿಂದು (ಮೇ.28) ಸಿದ್ದಿಗೋಷ್ಠಿ ನಡೆಸಿ ಮಾತನಾಡಿ, ಶೇ.95 ರಷ್ಟು ಪರಿಷ್ಕೃತ ಪುಸ್ತಕಗಳು ಈಗಾಗಲೇ ಶಾಲಾ ಮಕ್ಕಳ ಕೈಗೆ ಸೇರಿದ್ದು, ಪರಿಷ್ಕೃತ ಪುಸ್ತಕಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ವಿವರಿಸಿದರು.

ಮಕ್ಕಳು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಶೂ ವಿತರಿಸಲು ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಕೋವಿಡ್‌ ಬಳಿಕ ಯಾವುದೇ ಮಕ್ಕಳಿಗೆ ಈವರೆಗೆ ಸೈಕಲ್‌ ವಿತರಿಸಲಾಗಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಜತೆಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ವೇತನ ಹೆಚ್ಚಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, 2 ಗ್ರಾಮ ಪಂಚಾಯಿತಿಗಳಿಗೆ ಒಂದಂತೆ ಒಟ್ಟು 3000 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಸ್ಥಾಪಿಸಲಾಗುವುದು. 600 ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿಯೂ ಸಹಾ ವಿಶೇಷ ಬೇಸಿಗೆ ಶಿಬಿರ ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

5 mins ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

12 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

27 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

1 hour ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

2 hours ago