ಮೈಸೂರು

ದೇಶದಲ್ಲಿ ಮೋದಿ ಅಲೆಯೇ ಇಲ್ಲ : ಸಿದ್ದರಾಮಯ್ಯ !

ಮೈಸೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯೇ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಅವಲಂಬಿಸಿರುವುದರಿಂದ ಅವರ ಹೆಸರಿನಲ್ಲಿ ಮತ ಕೇಳುವ ಸ್ಥಿತಿ ಎದುರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಪರವಾದ ಅಲೆಯೇ ಇದೆ. ಎಲ್ಲಾ ಕಡೆ ಉತ್ತಮವಾದ ವಾತಾವರಣ ಇರುವ ಕಾರಣ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದರು.

ಕೊಟ್ಟ ಭರವಸೆಯನ್ನು ಈಡೇರಿಸದೆ ಖಾಲಿ ಚೊಂಬು ಕೊಟ್ಟಿದ್ದರಿಂದಲೇ ಜಾಹೀರಾತು ನೀಡಿದ್ದೇವೆಯೇ ಹೊರತು ರಾಜ್ಯದ ಖಜಾನೆ ಖಾಲಿ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಪ್ರಧಾನಿ ಮೋದಿ ಅಲೆ ಇಲ್ಲದಿದ್ದರೂ ಅಲೆ ಇದೆ ಎನ್ನುವ ಮಾತನ್ನಾಡುತ್ತಿದ್ದಾರೆ. ಖಾಲಿ ಚೊಂಬಿನ ಜಾಹೀರಾತು ನೀಡಿರುವುದು ಸರಿಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿಲ್ಲ.

ಅಭಿವೃದ್ಧಿಗೂ ಹಣ ಮೀಸಲಿಟ್ಟು ಅಭಿವೃದ್ಧಿಮಾಡುತ್ತಿದ್ದೇವೆ. ಹಳ್ಳಿಗಳಲ್ಲಿ ಕೈಗೆ ಚೊಂಬು ಕೊಟ್ಟರು ಅಂತಾರಲ್ಲ ಆ ರೀತಿ ಬಿಜೆಪಿ ಕಥೆಯಾಗಿದೆ ಎಂದು ಟೀಕಿಸಿದರು.

೧೫ ಲಕ್ಷ ರೂ. ಕೊಡುತ್ತೇವೆಂದು ಹೇಳಿದ್ದ ಮೋದಿ ಅವರು ಜಮಾ ಮಾಡಿದ್ರಾ? ೨ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದ್ರು? ರೈತರ ಆದಾಯ ದ್ವಿಗುಣ ಮಾಡ್ತೀವಿ ಅಂದ್ರು? ಹೇಳಿದ್ದನ್ನ ಒಂದೂ ಮಾಡದೆ ಇರುವ ಕಾರಣ ಖಾಲಿ ಚೊಂಬು ಕೊಟ್ಟಿದ್ದಾರೆಂದು ಜಾಹೀರಾತು ಕೊಡಲಾಗಿದೆಯೇ ಹೊರತು ಬೇರೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.

ನಾವು ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆದರೆ, ಬಿಜೆಪಿಯವರು ಏನನ್ನೂ ಮಾಡದೆ ಬರೀ ಮಾತನಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯವಾಗಿ ಬಳಕೆ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಒಂದು ಹೆಣ್ಣಿನ ಕೊಲೆಯ ವಿಚಾರವನ್ನು ಬಳಸಿಕೊಂಡು ರಾಜಕಾರಣಮಾಡುವುದು ದುರ್ದೈವದ ಸಂಗತಿ. ವೈಯಕ್ತಿಕ ಕಾರಣಕ್ಕಾಗಿ ಕೊಲೆ ಆಗಿದೆ. ಈ ಕೊಲೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದರೂ ಬಿಜೆಪಿಯವರು ರಾಜಕೀಯವಾಗಿ ಲಾಭ ಪಡೆಯಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ವಿರೋಧ ಪಕ್ಷದವರು ಪ್ರತಿಭಟನೆ ಮಾಡಲು ನಮ್ಮದೇನೂ ಅಭ್ಯಂತರವಿಲ್ಲ. ಎಲ್ಲರ ಕಾಲದಲ್ಲೂ ಕೊಲೆಗಳು ಆಗಿವೆ. ಹಾಗೆಂದ ಮಾತ್ರಕ್ಕೆ ನಾವು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎನ್ನುವ ಅರ್ಥವಲ್ಲ.

ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ನಮ್ಮ ಸರ್ಕಾರ ಗಂಭೀರವಾಗಿದೆ. ವೈಯಕ್ತಿಕ ವಿಚಾರದಲ್ಲಿ ನಡೆದ ಹತ್ಯೆಗೂ-ಕಾನೂನು ಸುವ್ಯವಸ್ಥೆಗೂ ಸಂಬಂಧವಿಲ್ಲ ಎಂದು ನುಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಎಂದಿಗೂ ಸರ್ವನಾಶವಾಗಲ್ಲ. ಸಿದ್ದರಾಮಯ್ಯ ಅವರೇ ನಾಶದ ಬಗ್ಗೆ ಹೇಳುತ್ತಾರೆಂದು ಹೇಳಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಜಾ.ದಳದವರಿಗೆ ಕಾಂಗ್ರೆಸ್ ಕಂಡರೆ ಭಯ ಹೊರತು ನನಗಲ್ಲ. ಅವರಿಗೆ ಭಯ ಇರುವ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಜತೆ ಮೈತ್ರಿಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ. ಭಯ ಇಲ್ಲದಿದ್ದರೆ ಪ್ರತ್ಯೇಕವಾಗಿ ಸ್ಪರ್ಧಿಸಬಹುದಾಗಿತ್ತು. ನಮಗೆ ಅವರನ್ನು ಕಂಡರೆ ಯಾವುದೇ ಭಯವಿಲ್ಲ. ನಾವು ಸ್ವಂತ ಶಕ್ತಿಯಿಂದ ಚುನಾವಣೆ ಎದುರಿಸಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

17 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago