ಮೈಸೂರು

ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಕೇವಲ ಶಾಂತಿಯಷ್ಟೇ ; ಶಾಸಕ ನರೇಂದ್ರಸ್ವಾಮಿ

ಮೈಸೂರು : ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ. ಕೇವಲ ಶಾಂತಿಯಷ್ಟೇ. ವಿಪಕ್ಷಗಳು ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸಹಿಸದೆ ಹತಾಶೆಯಿಂದ ಕೆಲವು ಮಾತುಗಳನ್ನಾಡಿ ಕಾಲ ಕಳೆಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು.

ನವೆಂಬರ್ ಕ್ರಾಂತಿ ಕುರಿತು ಪ್ರತಿಕ್ರಿಯಿಸಿದ ಅವರು, ಯಾರನ್ನು ಸಚಿವರಾಗಿ ಮಾಡಬೇಕು ಎಂಬುದೆಲ್ಲಾ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಜತೆಗೆ ನಾನೇನು ಸನ್ಯಾಸಿ ಅಲ್ಲ. ಪಕ್ಷ ಯಾವಾಗ ಜವಾಬ್ದಾರಿ ಕೊಡಬೇಕೋ ಆಗ ಕೊಡುತ್ತದೆ ಎಂದು ಹೇಳಿದರು.

ಇದನ್ನೂ ಓದಿ:-ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಅಧಿಕಾರ ಹಂಚಿಕೆ ಒಪ್ಪಂದದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಸಾರ್ವಜನಿಕವಾಗಿ ಚರ್ಚೆ ಯಾಗುವ ವಿಚಾರವಲ್ಲ. ಜ್ಞಾನ ಕಡಿಮೆ ಇರುವವರು ಅದನ್ನು ಮಾತನಾಡುತ್ತಾರೆ. ಕಾಂಗ್ರೆಸ್ ಶಾಸಕರಾಗಿ ರಲಿ, ವಿರೋಧ ಪಕ್ಷದವರೇ ಆಗಿರಲಿ ಮಾಹಿತಿ ಕೊರತೆಯಿಂದ ಅದನ್ನೆಲ್ಲಾ ಮಾತನಾಡುತ್ತಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಾವೆಲ್ಲಾ ಉತ್ತಮವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಅಹಿಂದ ಚಳವಳಿಯನ್ನು ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಮುಂದುವರಿಸಲಿ ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಕೂಡ ಅಹಿಂದ ಚಳವಳಿಯ ಭಾಗವಾಗಿದ್ದು, ಕಾಂಗ್ರೆಸ್ ಸಿದ್ಧಾಂತವೇ ಅಹಿಂದ ಸಿದ್ಧಾಂತವಾಗಿದೆ. ಸಿದ್ದರಾಮಯ್ಯನವರ ನಂತರ ಚಳವಳಿಯನ್ನು ಒಬ್ಬರು ಮುಂದುವರಿಸಬೇಕು ತಾನೇ. ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರ ಜತೆ ಸುದೀರ್ಘವಾಗಿ ಇದ್ದವರು. ಅವರೇ ಚಳವಳಿ ಮುಂದುವರಿಸಲಿ ಎಂಬುದು ನಮ್ಮ ಮನವಿಯೂ ಆಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago