ಮೈಸೂರು

ಅಭದ್ರತೆ ಪ್ರಶ್ನೆಯೇ ಇಲ್ಲ ಕಾಂಗ್ರೆಸ್ ಸುಭದ್ರ : ಸಚಿವ ಮುನಿಯಪ್ಪ

ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು‌. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 224 ಶಾಸಕರಿಗೂ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಎಲ್ಲರಿಗೂ ಆಸೆಗಳು ಸಹಜ. ನಮ್ಮ ಪಕ್ಷದಲ್ಲಿ ಒಟ್ಟು 136 ಸ್ಥಾನ ಇದೆ. ಸರ್ಕಾರದಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಇಲ್ಲ. ಸರ್ಕಾರವೂ ಭದ್ರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸರ್ಕಾರದಲ್ಲಿ ಸ್ಥಿರವಾಗಿದ್ದಾರೆ. ಅವರು ತಮ್ಮದೇ ಚಾಕಚಕ್ಯತೆಯಿಂದ ಆಡಳಿತ ನಡೆಸುತ್ತಿದ್ದಾರೆ‌ ಎಂದಿದ್ದಾರೆ.

ನಮ್ಮ ಸರ್ಕಾರ ರಾಜ್ಯಕ್ಕೆ ಉತ್ತಮ ಬಜೆಟ್ ಕೊಟ್ಟು ಒಳ್ಳೆಯ ಆಡಳಿತ ನಡೆಸುತ್ತಿದೆ. ನನಗೆ ಬಡವರಿಗೆ ಅಕ್ಕಿ ಕೊಡುವ ಜವಾಬ್ದಾರಿ ಕೊಟ್ಟಿದ್ದಾರೆ‌. ಆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಬೇರೆ ಪ್ರಶ್ನೆಗಳನ್ನು ಕೇಳಬೇಡಿ. ನಾನು ಬೇರೆ ರೀತಿಯ ಪ್ರಶ್ನೆಗಳಿಗೆ ಉತ್ತರ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದಿಂದ 5 ಕೆ.ಜಿ ಅಕ್ಕಿ ವಿತರಣೆ ಇನ್ನೂ ಭಾರಿ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ರೈತರಿಂದ ನೇರವಾಗಿ ಅಕ್ಕಿ ಖರೀದಿ ಮಾಡುವುದಿಲ್ಲ. ಆ ರೀತಿ ಖರೀದಿ ಮಾಡುವ ಪ್ರಶ್ನೆಯೇ ಸರ್ಕಾರದ ಮುಂದೆ ಇಲ್ಲ. ರೈಸ್ ಮಿಲ್‌ಗಳಿಂದ ಮಾತ್ರ ನಾವು ಅಕ್ಕಿ ಖರೀದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ. ಸದ್ಯಕ್ಕೆ ಯಾವುದೂ ಅಂತಿಮವಾಗಿಲ್ಲ. ಅಕ್ಕಿ ಸಾಗಾಣಿಕೆ ಸಮಸ್ಯೆ ಸೇರಿದಂತೆ ಹಲವು ರೀತಿಯ ಸವಾಲುಗಳಿವೆ. ಹೀಗಾಗಿ ಯಾವುದು ಅಂತಿಮವಾಗಿಲ್ಲ. ಪ್ರತಿ ತಿಂಗಳು ದೊಡ್ಡ ಪ್ರಮಾಣದ ಅಕ್ಕಿ ಖರೀದಿ ಅದು ಅಷ್ಟು ಸುಲಭದ ಮಾತಲ್ಲ. ಹೀಗಾಗಿ ಅದು ಸಮಯ ತೆಗೆದುಕೊಳ್ಳುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

lokesh

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

5 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

5 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

5 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

5 hours ago