ಮೈಸೂರು: ಇದು ಮಳೆಗಾಲ, ಹೀಗಾಗಿ ವಿದ್ಯುತ್ ವ್ಯತ್ಯಯ ಸಮಸ್ಯೆ ಕಾಮನ್. ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಚೆಸ್ಕಾಂ ನಗರದ ಹಲವೆಡೆ ವಿದ್ಯುತ್ ಕಡಿತ ಮಾಡಿದೆ.
ಆಗಸ್ಟ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಅಗ್ರಹಾರ ಫೀಡರ್ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಶಂಕರ ಮಠ, ಉತ್ತರಾಧಿಮಠ, ಅಗ್ರಹಾರ, ರಾಮಾನುಜ ರಸ್ತೆ 1ನೇ ಕ್ರಾಸ್ನಿಂದ 4ನೇ ಕ್ರಾಸ್ ವರೆಗೆ, ಸುಣ್ಣದಕೇರಿ, ತ್ಯಾಗರಾಜ ರಸ್ತೆ, ಹೊಸಕೇರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮುಂದುವರೆದು, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೂರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮುರುಡಗಳ್ಳಿ ಫೀಡರ್ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ತಳೂರು ಗ್ರಾಮ, ದೂರ ಗ್ರಾಮ, ದೊಡ್ಡಕಾಟೂರು ಗ್ರಾಮ, ಮುರುಡಗಳ್ಳಿ ಗ್ರಾಮ, ಹಳ್ಳಿಕೆರೆ ಹುಂಡಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇಲ್ಲೂ ವಿದ್ಯುತ್ ಇರಲ್ಲ….
ಆಗಸ್ಟ್ 12 ರಂದು ಬಿಳಿಕೆರೆ ಉಪವಿಭಾಗದ ಗದ್ದಿಗೆ ಶಾಖಾ ವ್ಯಾಪ್ತಿಯ ಜಿ.ವಿ.ಗುಡಿ ವಿದ್ಯುತ್ ವಿತರಣಾ ಕೇಂದ್ರದಿoದ ಹೆಚ್.ಡಿ.ಕೋಟೆ ಉಪವಿಭಾಗದ ಆಲನಹಳ್ಳಿ ಶಾಖಾ ವ್ಯಾಪ್ತಿಯ ಕ್ಯಾತನಹಳ್ಳಿ ಫೀಡರ್ಗೆ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ, ಬೆಳಿಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅಷ್ಟೆ ಅಲ್ಲದೇ, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಏಗಿ ದೇವನೂರು ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ. ಕಾವೇರಿ ಫೀಡರ್ನಲ್ಲಿ ಮುಖ್ಯ ಪ್ರದೇಶಗಳಾದ…. ಕಾವೇರಿ ಆಸ್ಪತ್ರೆ, ಯರಗನಹಳ್ಳಿ, ವಿದ್ಯಾನಗರ, ರಾಘವೇಂದ್ರ ಬಡಾವಣೆ, ಟೆರಿಷೀಯನ್ ಕಾಲೇಜು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದ್ದು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…