ಮೈಸೂರು: ಇದು ಮಳೆಗಾಲ, ಹೀಗಾಗಿ ವಿದ್ಯುತ್ ವ್ಯತ್ಯಯ ಸಮಸ್ಯೆ ಕಾಮನ್. ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಚೆಸ್ಕಾಂ ನಗರದ ಹಲವೆಡೆ ವಿದ್ಯುತ್ ಕಡಿತ ಮಾಡಿದೆ.
ಆಗಸ್ಟ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಅಗ್ರಹಾರ ಫೀಡರ್ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಶಂಕರ ಮಠ, ಉತ್ತರಾಧಿಮಠ, ಅಗ್ರಹಾರ, ರಾಮಾನುಜ ರಸ್ತೆ 1ನೇ ಕ್ರಾಸ್ನಿಂದ 4ನೇ ಕ್ರಾಸ್ ವರೆಗೆ, ಸುಣ್ಣದಕೇರಿ, ತ್ಯಾಗರಾಜ ರಸ್ತೆ, ಹೊಸಕೇರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮುಂದುವರೆದು, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೂರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮುರುಡಗಳ್ಳಿ ಫೀಡರ್ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ತಳೂರು ಗ್ರಾಮ, ದೂರ ಗ್ರಾಮ, ದೊಡ್ಡಕಾಟೂರು ಗ್ರಾಮ, ಮುರುಡಗಳ್ಳಿ ಗ್ರಾಮ, ಹಳ್ಳಿಕೆರೆ ಹುಂಡಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇಲ್ಲೂ ವಿದ್ಯುತ್ ಇರಲ್ಲ….
ಆಗಸ್ಟ್ 12 ರಂದು ಬಿಳಿಕೆರೆ ಉಪವಿಭಾಗದ ಗದ್ದಿಗೆ ಶಾಖಾ ವ್ಯಾಪ್ತಿಯ ಜಿ.ವಿ.ಗುಡಿ ವಿದ್ಯುತ್ ವಿತರಣಾ ಕೇಂದ್ರದಿoದ ಹೆಚ್.ಡಿ.ಕೋಟೆ ಉಪವಿಭಾಗದ ಆಲನಹಳ್ಳಿ ಶಾಖಾ ವ್ಯಾಪ್ತಿಯ ಕ್ಯಾತನಹಳ್ಳಿ ಫೀಡರ್ಗೆ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ, ಬೆಳಿಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅಷ್ಟೆ ಅಲ್ಲದೇ, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಏಗಿ ದೇವನೂರು ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ. ಕಾವೇರಿ ಫೀಡರ್ನಲ್ಲಿ ಮುಖ್ಯ ಪ್ರದೇಶಗಳಾದ…. ಕಾವೇರಿ ಆಸ್ಪತ್ರೆ, ಯರಗನಹಳ್ಳಿ, ವಿದ್ಯಾನಗರ, ರಾಘವೇಂದ್ರ ಬಡಾವಣೆ, ಟೆರಿಷೀಯನ್ ಕಾಲೇಜು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದ್ದು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…