ಮೈಸೂರು: ಇದು ಮಳೆಗಾಲ, ಹೀಗಾಗಿ ವಿದ್ಯುತ್ ವ್ಯತ್ಯಯ ಸಮಸ್ಯೆ ಕಾಮನ್. ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಚೆಸ್ಕಾಂ ನಗರದ ಹಲವೆಡೆ ವಿದ್ಯುತ್ ಕಡಿತ ಮಾಡಿದೆ.
ಆಗಸ್ಟ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಅಗ್ರಹಾರ ಫೀಡರ್ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಶಂಕರ ಮಠ, ಉತ್ತರಾಧಿಮಠ, ಅಗ್ರಹಾರ, ರಾಮಾನುಜ ರಸ್ತೆ 1ನೇ ಕ್ರಾಸ್ನಿಂದ 4ನೇ ಕ್ರಾಸ್ ವರೆಗೆ, ಸುಣ್ಣದಕೇರಿ, ತ್ಯಾಗರಾಜ ರಸ್ತೆ, ಹೊಸಕೇರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮುಂದುವರೆದು, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೂರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮುರುಡಗಳ್ಳಿ ಫೀಡರ್ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ತಳೂರು ಗ್ರಾಮ, ದೂರ ಗ್ರಾಮ, ದೊಡ್ಡಕಾಟೂರು ಗ್ರಾಮ, ಮುರುಡಗಳ್ಳಿ ಗ್ರಾಮ, ಹಳ್ಳಿಕೆರೆ ಹುಂಡಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಇಲ್ಲೂ ವಿದ್ಯುತ್ ಇರಲ್ಲ….
ಆಗಸ್ಟ್ 12 ರಂದು ಬಿಳಿಕೆರೆ ಉಪವಿಭಾಗದ ಗದ್ದಿಗೆ ಶಾಖಾ ವ್ಯಾಪ್ತಿಯ ಜಿ.ವಿ.ಗುಡಿ ವಿದ್ಯುತ್ ವಿತರಣಾ ಕೇಂದ್ರದಿoದ ಹೆಚ್.ಡಿ.ಕೋಟೆ ಉಪವಿಭಾಗದ ಆಲನಹಳ್ಳಿ ಶಾಖಾ ವ್ಯಾಪ್ತಿಯ ಕ್ಯಾತನಹಳ್ಳಿ ಫೀಡರ್ಗೆ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ, ಬೆಳಿಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅಷ್ಟೆ ಅಲ್ಲದೇ, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಏಗಿ ದೇವನೂರು ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ. ಕಾವೇರಿ ಫೀಡರ್ನಲ್ಲಿ ಮುಖ್ಯ ಪ್ರದೇಶಗಳಾದ…. ಕಾವೇರಿ ಆಸ್ಪತ್ರೆ, ಯರಗನಹಳ್ಳಿ, ವಿದ್ಯಾನಗರ, ರಾಘವೇಂದ್ರ ಬಡಾವಣೆ, ಟೆರಿಷೀಯನ್ ಕಾಲೇಜು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದ್ದು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…