Mysore
23
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.

ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಜಯಪ್ರಕಾಶ್ ಎಂಬುವವರ ಮನೆಯಲ್ಲಿದ್ದ 180 ಗ್ರಾಂ ಚಿನ್ನ ಕಳುವುವಾಗಿದೆ.

ಮಾರಕಾಸ್ತ್ರಗಳನ್ನು ಹಿಡಿದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದ್ದು, ಕಳ್ಳರ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ: ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಜುಬಿಲಿಯೆಂಟ್ ಬಡಾವಣೆಯಲ್ಲಿ ಬಾಡಿಗೆಗೆ ಇದ್ದ ಜಯಪ್ರಕಾಶ್ ಅವರು, ಸೂರ್ಯೋದಯ ಬಡಾವಣೆಯಲ್ಲಿ ಹೊಸ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.

ಕಳೆದ ಗುರುವಾರ ನಗದು ಮತ್ತು ಚಿನ್ನಾಭರಣಗಳ ಸಮೇತ ಪೀಠೋಪಕರಣಗಳನ್ನು ಹೊಸಮನೆಗೆ ಶಿಫ್ಟ್ ಮಾಡಿದ್ದರು. ಮರುದಿನ ಆ ಮನೆಯ ವಾಸಕ್ಕೆ ಬರಲು ನಿರ್ಧರಿಸಿ ಹಳೆಯ ಮನೆಯಲ್ಲಿ ಮಲಗಿದ್ದರು.

ಬೆಳಿಗ್ಗೆ ಎದ್ದು ಹೊಸ ಮನೆಗೆ ತೆರಳಿದಾಗ ಬಾಗಿಲ ಬೀಗ ಮುರಿದು ಕಳ್ಳತನವಾಗಿರುವ ದೃಶ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!