ಮೈಸೂರು

ದೊಡ್ಡ ಆಲಹಳ್ಳಿಯಿಂದ ದೊಡ್ಡ ಸ್ಥಾನದವರೆಗೆ ; ಡಿಕೆಶಿ ಅವರ 45 ವರ್ಷದ ರಾಜಕೀಯ ಪಯಣ ಹೀಗಿದೆ

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷ, ರಾಜ್ಯ ಮತ್ತು ಜನಸಾಮಾನ್ಯರ ಏಳಿಗೆಗಾಗಿ ಕಳೆದ 45 ವರ್ಷಗಳಿಂದ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ರಾಜಕೀಯ ಜೀವನ ಒಂದು ಅದ್ವಿತೀಯ ಪಯಣ. 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್‌ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಕೀಯ ವಲಯದಲ್ಲಿ “ಟ್ರಬಲ್‌ಶೂಟರ್” ಎಂದೇ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು 1980ರಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಮೂಲಕ ರಾಜಕೀಯ ಪ್ರವೇಶಿಸಿದರು. ವಿದ್ಯಾರ್ಥಿ ಜೀವನದಲ್ಲಿಯೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಗಮನ ಸೆಳೆದಿದ್ದ ಅವರು, ಯುವ ನಾಯಕರಾಗಿ ಕಾಂಗ್ರೆಸ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.
ಅವರ ಬಗ್ಗೆ ಕಿರು ಮಾಹಿತಿ ಇಲ್ಲಿದೆ.

ಜೀವನದ ಹಾದಿ ಮತ್ತು ಪ್ರಮುಖ ಘಟ್ಟಗಳು

1980 | ರಾಜಕೀಯ ಪ್ರವೇಶ
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಮೂಲಕ ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪ್ರವೇಶವಾಯಿತು. ಪದವಿ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಂದ ರಾಜಕೀಯ ಬೆಂಬಲವೂ ಸಿಕ್ಕಿತ್ತು.

1985 | ಮೊದಲ ಚುನಾವಣಾ ಸ್ಪರ್ಧೆ
ಸಾತನೂರು ಕ್ಷೇತ್ರದಿಂದ ಹೆಚ್. ಡಿ. ದೇವೇಗೌಡರ ವಿರುದ್ಧ ಸ್ಪರ್ಧೆ

1989 | ಮೊದಲ ಚುನಾವಣಾ ಗೆಲುವು, ಸಾತನೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ

1990-1992 | ಸಚಿವರು, ಕಾರಾಗೃಹ ಮತ್ತು ಗೃಹ ರಕ್ಷಕ ಇಲಾಖೆ, ಜೈಲುಗಳಲ್ಲಿ ಪುನರ್ವಸತಿ ಮತ್ತು ಕೌಶಲ್ಯಾಭಿವೃದ್ಧಿ ಸುಧಾರಣೆ

1999-2004 | ಸಚಿವರು, ನಗರಾಭಿವೃದ್ಧಿ ; ನಗರ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

2014-2018 | ಸಚಿವರು, ಇಂಧನ

2018-2019 | ಸಚಿವರು, ಬೃಹತ್ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ

2019 | ಪಕ್ಷ ನಿಷ್ಠೆಯ ಪರೀಕ್ಷೆ
ರಾಜಕೀಯ ಒತ್ತಡಗಳ ನಡುವೆಯೂ ಪಕ್ಷವನ್ನು ಉಳಿಸಲು ಜೈಲು ಶಿಕ್ಷೆಯನ್ನು ಅನುಭವಿಸಿದರು.

2020-ಪ್ರಸ್ತುತ | ಕೆಪಿಸಿಸಿ ಅಧ್ಯಕ್ಷ
ಕರ್ನಾಟಕದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ; ಕಾಂಗ್ರೆಸ್ ಪಕ್ಷದ ಆಂತರಿಕ ಬಿಕ್ಕಟ್ಟುಗಳ ನಿವಾರಣೆ

2023 | ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ

2023-ಪ್ರಸ್ತುತ | ಉಪ ಮುಖ್ಯಮಂತ್ರಿಗಳು, 

ಮೂಲಸೌಕರ್ಯಗಳ ಸುಧಾರಣೆ, ನಗರ ಆಧುನೀಕರಣ ಮತ್ತು ದೀರ್ಘಾವಧಿಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಜನಪರ ಆಡಳಿತದೊಂದಿಗೆ ಕರ್ನಾಟಕವನ್ನು ಮುನ್ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

3 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

3 hours ago

ಓದುಗರ ಪತ್ರ: ಆನ್‌ಲೈನ್ ಕಾರ್ಯಭಾರದಿಂದ ಶಿಕ್ಷಕರಿಗೆ ಮುಕ್ತಿ ನೀಡಿ

ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್‌ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…

3 hours ago

ಮಲ್ಲಳ್ಳಿ ಗ್ರಾಮಕ್ಕಿಲ್ಲ ಮೂಲ ಸೌಕರ್ಯ!

ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…

3 hours ago

ಮಂಡ್ಯ | ಸೆಸ್ಕಾಂ ಎಇ ಲೋಕಾ ಬಲೆಗೆ

ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…

15 hours ago