ಮೈಸೂರು

ದೇಶದಲ್ಲೇ ಮೊದಲ ಬಾರಿಗೆ QR ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ಇದು

ಕ್ಯೂ ಆರ್ ಕೋಡ್ ಬೋರ್ಡ್ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ನಂಜನಗೂಡು : ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಗರದ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ನಂಜನಗೂಡು ಆಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.

ನಂಜನಗೂಡು ನಗರಸಭಾ ವತಿಯಿಂದ ನಗರಸಭೆ ಆವರಣದಲ್ಲಿ ಶುಕ್ರವಾರ 31 ವಾರ್ಡ್ ಗಳಿಗೆ ಸಂಬಂಧಿಸಿದಂತೆ ಕ್ಯೂ ಆರ್ ಕೋಡ್ ಬೋರ್ಡ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ನಂಜನಗೂಡು ನಗರಕ್ಕೆ ಸಂತಸವಾಗಿದೆ. ಭಾರತ ದೇಶದಲ್ಲಿ ಮೊದಲನೆಯ ಕ್ಯೂ ಆರ್ ಕೋಡ್ ನಗರಸಭೆ ಎಂದು ರಾಜ್ಯದ ಇತಿಹಾಸದಲ್ಲಿ ಸೇರ್ಪಡೆಯಾಗುತ್ತಿದೆ. ಇಂತಹ ವ್ಯವಸ್ಥೆ ದೇಶದ ಮಹಾನಗರ ಪಾಲಿಕೆಗಳಲ್ಲಿ ಮಾತ್ರ ಅಳವಡಿಸಲಾಗುತ್ತಿತ್ತು. ಪುರಸಭೆ ಮತ್ತು ನಗರಸಭೆಗಳಿಗೆ ದೇಶದ ಯಾವುದೇ ಭಾಗದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಿರಲಿಲ್ಲ. ಅಶೋಕ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ನಂಜನಗೂಡಿನ ಪ್ರತಿ ವಾರ್ಡ್ನ ನಾಗರಿಕರಿಗೆ ಈ ಸೌಲಭ್ಯ ಸಹಕಾರಿಯಾಗಲಿದೆ ಎಂದರು.

ನಗರಸಭೆ ಅಧಿಕಾರಿಗಳು ಹಾಗೂ ನಾಗರೀಕರನ್ನು ನಿರಂತರ ಸಂಪರ್ಕದಲ್ಲಿಟ್ಟುಕೊಂಡು ಸರಿಯಾದ ರೀತಿಯಲ್ಲಿ ನಗರದ ಕೆಲಸ ಮಾಡಲು ಬಹಳ ಅನುಕೂಲವಾಗಿದೆ. ನಗರ ವ್ಯಾಪಕವಾಗಿ ಅಭಿವೃದ್ಧಿಯಾಗುತ್ತಿದೆ. ಕೈಗಾರಿಕೆಗಳು, ಶೈಕ್ಷಣಿಕ ಸಂಸ್ಥೆಗಳು ನಂಜನಗೂಡಿನಲ್ಲಿ ಬೆಳೆಯುತ್ತಿವೆ. ದೇಶ ವಿದೇಶ ಸೇರಿದಂತೆ ಬೇರೆ ಬೇರೆ ಪ್ರದೇಶಗಳಿಂದ ಇಲ್ಲಿ ಬಂದು ಬಂಡವಾಳ ಹೂಡುತ್ತಿದ್ದಾರೆ. ಇಂತಹ ತಂತ್ರಜ್ಞಾನವನ್ನು ಬಳಕೆ ಮಾಡಿ ಮತ್ತಷ್ಟು ಉನ್ನತಿ ಕಳುಹಿಸುವ ಯೋಜನೆ ಇದಾಗಿದ್ದು, ಈಗಾಗಲೇ ಮುಖ್ಯಮಂತ್ರಿಯವರು ನಗರದ ಅಭಿವೃದ್ಧಿಗೆ ಸುಮಾರು 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು.

ನಂತರ ಅಶೋಕ ವಿಶ್ವವಿದ್ಯಾಲಯದ ಪರಿಕಲ್ಪನಾ ಮುಖ್ಯಸ್ಥೆ ಐಶ್ವರ್ಯ ಸುನಾದ್ ಮಾತನಾಡಿ, ಮುಂದಿನ ಹತ್ತು ವರ್ಷ ಮುಖ್ಯ ಸಮಯ ಇದಾಗಿದೆ. ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ನಗರಗಳನ್ನು ಸುಧಾರಣೆ ಮಾಡಲು ಈ ಯೋಜನೆ ಬಹಳ ಅನುಕೂಲವಾಗಿದೆ. ನಾಗರಿಕರು ತಮ್ಮ ವಾರ್ಡ್ಗಳಲ್ಲಿ ಸಮಸ್ಯೆ ಕಂಡು ಬಂದರೆ ಏನು ಮಾಡಬೇಕು ಎಂಬುದನ್ನು ಸ್ಕ್ಯಾನ್ ಮಾಡಿ ನಂತರ ತಿಳಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಅಧ್ಯಕ್ಷ ಶ್ರೀಕಂಠ ಸ್ವಾಮಿ, ರೆಹನಾ ಬಾನು, ಮೈತ್ರಾದೇವಿ, ಹೇಮಂತ್ ಕುಮಾರ್ ಸೇರಿದಂತೆ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

49 mins ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

1 hour ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

3 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

3 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

4 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

4 hours ago