ಮೈಸೂರು

ದೇಶದಲ್ಲೇ ಮೊದಲ ಬಾರಿಗೆ QR ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ಇದು

ಕ್ಯೂ ಆರ್ ಕೋಡ್ ಬೋರ್ಡ್ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ನಂಜನಗೂಡು : ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಗರದ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ನಂಜನಗೂಡು ಆಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.

ನಂಜನಗೂಡು ನಗರಸಭಾ ವತಿಯಿಂದ ನಗರಸಭೆ ಆವರಣದಲ್ಲಿ ಶುಕ್ರವಾರ 31 ವಾರ್ಡ್ ಗಳಿಗೆ ಸಂಬಂಧಿಸಿದಂತೆ ಕ್ಯೂ ಆರ್ ಕೋಡ್ ಬೋರ್ಡ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ನಂಜನಗೂಡು ನಗರಕ್ಕೆ ಸಂತಸವಾಗಿದೆ. ಭಾರತ ದೇಶದಲ್ಲಿ ಮೊದಲನೆಯ ಕ್ಯೂ ಆರ್ ಕೋಡ್ ನಗರಸಭೆ ಎಂದು ರಾಜ್ಯದ ಇತಿಹಾಸದಲ್ಲಿ ಸೇರ್ಪಡೆಯಾಗುತ್ತಿದೆ. ಇಂತಹ ವ್ಯವಸ್ಥೆ ದೇಶದ ಮಹಾನಗರ ಪಾಲಿಕೆಗಳಲ್ಲಿ ಮಾತ್ರ ಅಳವಡಿಸಲಾಗುತ್ತಿತ್ತು. ಪುರಸಭೆ ಮತ್ತು ನಗರಸಭೆಗಳಿಗೆ ದೇಶದ ಯಾವುದೇ ಭಾಗದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಿರಲಿಲ್ಲ. ಅಶೋಕ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ನಂಜನಗೂಡಿನ ಪ್ರತಿ ವಾರ್ಡ್ನ ನಾಗರಿಕರಿಗೆ ಈ ಸೌಲಭ್ಯ ಸಹಕಾರಿಯಾಗಲಿದೆ ಎಂದರು.

ನಗರಸಭೆ ಅಧಿಕಾರಿಗಳು ಹಾಗೂ ನಾಗರೀಕರನ್ನು ನಿರಂತರ ಸಂಪರ್ಕದಲ್ಲಿಟ್ಟುಕೊಂಡು ಸರಿಯಾದ ರೀತಿಯಲ್ಲಿ ನಗರದ ಕೆಲಸ ಮಾಡಲು ಬಹಳ ಅನುಕೂಲವಾಗಿದೆ. ನಗರ ವ್ಯಾಪಕವಾಗಿ ಅಭಿವೃದ್ಧಿಯಾಗುತ್ತಿದೆ. ಕೈಗಾರಿಕೆಗಳು, ಶೈಕ್ಷಣಿಕ ಸಂಸ್ಥೆಗಳು ನಂಜನಗೂಡಿನಲ್ಲಿ ಬೆಳೆಯುತ್ತಿವೆ. ದೇಶ ವಿದೇಶ ಸೇರಿದಂತೆ ಬೇರೆ ಬೇರೆ ಪ್ರದೇಶಗಳಿಂದ ಇಲ್ಲಿ ಬಂದು ಬಂಡವಾಳ ಹೂಡುತ್ತಿದ್ದಾರೆ. ಇಂತಹ ತಂತ್ರಜ್ಞಾನವನ್ನು ಬಳಕೆ ಮಾಡಿ ಮತ್ತಷ್ಟು ಉನ್ನತಿ ಕಳುಹಿಸುವ ಯೋಜನೆ ಇದಾಗಿದ್ದು, ಈಗಾಗಲೇ ಮುಖ್ಯಮಂತ್ರಿಯವರು ನಗರದ ಅಭಿವೃದ್ಧಿಗೆ ಸುಮಾರು 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು.

ನಂತರ ಅಶೋಕ ವಿಶ್ವವಿದ್ಯಾಲಯದ ಪರಿಕಲ್ಪನಾ ಮುಖ್ಯಸ್ಥೆ ಐಶ್ವರ್ಯ ಸುನಾದ್ ಮಾತನಾಡಿ, ಮುಂದಿನ ಹತ್ತು ವರ್ಷ ಮುಖ್ಯ ಸಮಯ ಇದಾಗಿದೆ. ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ನಗರಗಳನ್ನು ಸುಧಾರಣೆ ಮಾಡಲು ಈ ಯೋಜನೆ ಬಹಳ ಅನುಕೂಲವಾಗಿದೆ. ನಾಗರಿಕರು ತಮ್ಮ ವಾರ್ಡ್ಗಳಲ್ಲಿ ಸಮಸ್ಯೆ ಕಂಡು ಬಂದರೆ ಏನು ಮಾಡಬೇಕು ಎಂಬುದನ್ನು ಸ್ಕ್ಯಾನ್ ಮಾಡಿ ನಂತರ ತಿಳಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಅಧ್ಯಕ್ಷ ಶ್ರೀಕಂಠ ಸ್ವಾಮಿ, ರೆಹನಾ ಬಾನು, ಮೈತ್ರಾದೇವಿ, ಹೇಮಂತ್ ಕುಮಾರ್ ಸೇರಿದಂತೆ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago