ಮೈಸೂರು : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ವಿಚಾರವಾಗಿ ಗಲಾಟೆ ನಡೆಯುತ್ತಿದೆ. ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. ಕಾವೇರಿ ನೀರಾವರಿ ನಿಗಮದವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾವೇರಿ ವ್ಯಾಪ್ತಿಯ 4 ಡ್ಯಾಂಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಇದೆ. ಪ್ರತಿ ವರ್ಷ ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗಲಿದೆ. ಈ ಸಂಬಂಧ ಸರ್ಕಾರ ಸೆಂಟ್ರಲ್ ವಾಟರ್ ಕಮಿಷನ್ಗೆ ಪತ್ರ ಬರೆದಿದೆ. ಕಾವೇರಿ ನೀರು ಬಿಡುವ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತಮಿಳುನಾಡಿಗೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಬಿಜೆಪಿ ನಾಯಕರು ಕೂಡ ಕೇಂದ್ರದ ಗಮನಕ್ಕೆ ತರಲಿ. ರಾಜ್ಯದಲ್ಲಿ ಮಳೆಯ ಅಭಾವ ಇದೆ. ಜುಲೈ ತಿಂಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕುಡಿಯುವ ನೀರಿಗೆ ಸಮಸ್ಯೆಯಾಗುವ ವಾತಾವರಣ ಇದೆ. ಈಗಲೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದರು.
ಹಳೇ ಮೈಸೂರು ಭಾಗದ ಕಾವೇರಿ, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಸಂಗ್ರಹ ಇದೆ. ಕೆ.ಆರ್.ಎಸ್ನಲ್ಲಿ 2.825 ಟಿಎಂಸಿ, ಹಾರಂಗಿಯಲ್ಲಿ 1.556 ಟಿಎಂಸಿ, ಕಬಿನಿಯಲ್ಲಿ 0.68 ಟಿಎಂಸಿ, ಹೇಮಾವತಿಯಲ್ಲಿ 2 ಟಿಎಂಸಿ ನೀರು ಮಾತ್ರ ಇದೆ ಎಂದು ತಿಳಿಸಿದರು.
ಇನ್ನು ಬೆಂಗಳೂರು ನಗರ ಒಂದಕ್ಕೆ ಮೂರುವರೆ ಟಿಎಂಸಿ ನೀರು ಬೇಕು. ಹಾಸನ, ಮಡಿಕೇರಿ, ಮೈಸೂರು ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ರೂರಲ್ಗೆ ಎರಡೂವರೆ ಟಿಎಂಸಿ ನೀರು ಬೇಕು. ಕೃಷಿಗೆ ಐದು ಟಿಎಂಸಿ ನೀರು ಬೇಕು. ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗುತ್ತದೆ ಎಂದು ಹೇಳಿದರು.
ಸೆಂಟ್ರಲ್ ವಾಟರ್ ಕಮಿಷನ್ನವರಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಈಗ ತಮಿಳುನಾಡಿಗೆ ನೀರು ಬಿಟ್ಟರೆ ಪರಿಸ್ಥಿತಿ ಕಷ್ಟವಾಗುತ್ತದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲಾಗಲ್ಲ ಎಂದರು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಹೇಳಬೇಕು. ಬಿಜೆಪಿಯವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾವೇರಿ ನೀರು ಬಿಡುವುದು ತಡೆಯುವುದು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆಮೇಲೆ ಮೀಡಿಯಾ ಮುಂದೆ ಬಾಯಿ ಬಡಿದುಕೊಳ್ಳಬೇಡಿ. ರಾಜ್ಯದ ಜನರಿಗೆ ನೀರು ಕೊಡಿಸುವ ಕೆಲಸ ಮಾಡಿ ಕೇಂದ್ರದಲ್ಲಿ ನಿಮ್ಮ ಸರ್ಕಾರವೇ ಇರುವುದು ಎಂದು ವಾಗ್ದಾಳಿ ಮಾಡಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…