ಮೈಸೂರು

ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​

ಮೈಸೂರು : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ವಿಚಾರವಾಗಿ ಗಲಾಟೆ ನಡೆಯುತ್ತಿದೆ. ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. ಕಾವೇರಿ ನೀರಾವರಿ ನಿಗಮದವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾವೇರಿ ವ್ಯಾಪ್ತಿಯ 4 ಡ್ಯಾಂಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಇದೆ. ಪ್ರತಿ ವರ್ಷ ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗಲಿದೆ. ಈ ಸಂಬಂಧ ಸರ್ಕಾರ ಸೆಂಟ್ರಲ್​​ ವಾಟರ್ ಕಮಿಷನ್​ಗೆ ಪತ್ರ ಬರೆದಿದೆ. ಕಾವೇರಿ ನೀರು ಬಿಡುವ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತಮಿಳುನಾಡಿಗೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ನಾಯಕರು ಕೂಡ ಕೇಂದ್ರದ ಗಮನಕ್ಕೆ ತರಲಿ. ರಾಜ್ಯದಲ್ಲಿ ಮಳೆಯ ಅಭಾವ ಇದೆ. ಜುಲೈ ತಿಂಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕುಡಿಯುವ ನೀರಿಗೆ ಸಮಸ್ಯೆಯಾಗುವ ವಾತಾವರಣ ಇದೆ. ಈಗಲೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದರು.

ಹಳೇ ಮೈಸೂರು ಭಾಗದ ಕಾವೇರಿ, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಸಂಗ್ರಹ ಇದೆ. ಕೆ.ಆರ್.ಎಸ್‌ನಲ್ಲಿ 2.825 ಟಿಎಂಸಿ, ಹಾರಂಗಿಯಲ್ಲಿ 1.556 ಟಿಎಂಸಿ, ಕಬಿನಿಯಲ್ಲಿ 0.68 ಟಿಎಂಸಿ, ಹೇಮಾವತಿಯಲ್ಲಿ 2 ಟಿಎಂಸಿ ನೀರು ಮಾತ್ರ ಇದೆ ಎಂದು ತಿಳಿಸಿದರು.

ಇನ್ನು ಬೆಂಗಳೂರು ನಗರ ಒಂದಕ್ಕೆ ಮೂರುವರೆ ಟಿಎಂಸಿ ನೀರು ಬೇಕು. ಹಾಸನ, ಮಡಿಕೇರಿ, ಮೈಸೂರು ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ರೂರಲ್‌ಗೆ ಎರಡೂವರೆ ಟಿಎಂಸಿ ನೀರು ಬೇಕು. ಕೃಷಿಗೆ ಐದು ಟಿಎಂಸಿ ನೀರು ಬೇಕು. ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗುತ್ತದೆ ಎಂದು ಹೇಳಿದರು.

ಸೆಂಟ್ರಲ್ ವಾಟರ್ ಕಮಿಷನ್‌ನವರಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಈಗ ತಮಿಳುನಾಡಿಗೆ ನೀರು ಬಿಟ್ಟರೆ ಪರಿಸ್ಥಿತಿ ಕಷ್ಟವಾಗುತ್ತದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲಾಗಲ್ಲ ಎಂದರು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಹೇಳಬೇಕು. ಬಿಜೆಪಿಯವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾವೇರಿ ನೀರು ಬಿಡುವುದು ತಡೆಯುವುದು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆಮೇಲೆ ಮೀಡಿಯಾ ಮುಂದೆ ಬಾಯಿ ಬಡಿದುಕೊಳ್ಳಬೇಡಿ. ರಾಜ್ಯದ ಜನರಿಗೆ ನೀರು ಕೊಡಿಸುವ ಕೆಲಸ ಮಾಡಿ ಕೇಂದ್ರದಲ್ಲಿ ನಿಮ್ಮ ಸರ್ಕಾರವೇ ಇರುವುದು ಎಂದು ವಾಗ್ದಾಳಿ ಮಾಡಿದರು.

lokesh

Recent Posts

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

8 mins ago

ಶಾಲಾ ಮಕ್ಕಳಿಗೆ ಕಳಪೆ ಊಟ ; ಮುಖ್ಯ ಶಿಕ್ಷಕಿ ಅಮಾನತ್ತು

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ…

23 mins ago

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ…

33 mins ago

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

2 hours ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

2 hours ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

3 hours ago